ಅಂಜಿಕಿನ್ನಾತಕಯ್ಯ , ಸಜ್ಜನರಿಗೆ

ಅಂಜಿಕಿನ್ನಾತಕಯ್ಯ , ಸಜ್ಜನರಿಗೆ

(ರಾಗ ಕಲ್ಯಾಣಿ ಅಟತಾಳ) ಅಂಜಿಕಿನ್ನಾತಕಯ್ಯ , ಸಜ್ಜನರಿಗೆ ಅಂಜಿಕಿನ್ನಾತಕಯ್ಯ ||ಪ|| ಸಂಕ್ಜೀವರಾಯರ ಸ್ಮರಣೆ ಮಾಡಿದ ಮೇಲೆ || ಅ.ಪ.|| ಕನಸಿಲಿ ಮನಸಿಲಿ ಕಳವಳವಾದರೆ ಹನುಮನ ನೆನೆದರೆ ಹಾರಿಹೋಗದೆ ಪಾಪ || ರೋಮರೋಮಕೆ ಕೋಟಿ ಲಿಂಗವುದುರಿಸಿದ ಭೀಮನ ನೆನದರೆ ಬಿಟ್ಟು ಹೋಗದೆ ಪಾಪ || ಪುರಂದರವಿಠಲನ ಪೂಜೆಯ ಮಾಡುವ ಗುರು ಮಧ್ವರಾಯರ ಸ್ಮರಣೆಮಾಡಿದ ಮೇಲೆ ||
ದಾಸ ಸಾಹಿತ್ಯ ಪ್ರಕಾರ
ಬರೆದವರು