ಈಸಬೇಕು ಇದ್ದು ಜಯಿಸಬೇಕು

ಈಸಬೇಕು ಇದ್ದು ಜಯಿಸಬೇಕು

ಈಸಬೇಕು ಇದ್ದು ಜಯಿಸಬೇಕು ||ಪ|| ಹೇಸಿಗೆ ಸಂಸಾರದಲ್ಲಿ ಆಶಾಲೇಶ ಇಡದ್ಹಾಂಗ ||ಅ.ಪ.|| ತಾಮರಸ ಜಲದಂತೆ ಪ್ರೇಮವಿಟ್ಟು ಭವದೊಳು ಸ್ವಾಮಿ ರಾಮ ಎನುತ ಪಾಡಿ ಕಾಮಿತ ಕಯ್ಗೊಂಬರೆಲ್ಲ ಗೇರು ಹಣ್ಣಿನಲ್ಲಿ ಬೀಜ ಸೇರಿದಂತೆ ಸಂಸಾರದಿ ಮೀರಿಯಾಸೆ ಮಾಡದಲೆ ಧೀರಕೃಷ್ಣನ ಭಕುತರೆಲ್ಲ ಮಾಂಸದಾಸೆಗೆ ಮತ್ಸ್ಯ ಸಿಲುಕಿ ಹಿಂಸೆ ಪಟ್ಟ ಪರಿಯಂತೆ ಮೋಸ ಹೋಗದ್ಹಾಂಗೆ ಜಗದೀಶ ಪುರಂದರ ವಿಠಲನ ನೆನೆದು
ದಾಸ ಸಾಹಿತ್ಯ ಪ್ರಕಾರ
ಬರೆದವರು
ಬಗೆ