ಒಂದು ಬಾರಿ ಸ್ಮರಣೆ ಸಾಲದೆ

ಒಂದು ಬಾರಿ ಸ್ಮರಣೆ ಸಾಲದೆ

ಒಂದು ಬಾರಿ ಸ್ಮರಣೆ ಸಾಲದೆ ಆನಂದತೀರ್ಥರ ಪೂರ್ಣಪ್ರಜ್ಞರ ಸರ್ವಜ್ಞರಾಯರ ಮಧ್ವರಾಯರ|| ಹಿಂದನೇಕ ಜನ್ಮಗಳಲಿ ನೊಂದು ಯೋನಿಯಲ್ಲಿ ಬಂದು ಇಂದಿರೇಶ ಹರಿಯ ಪಾದವ ಹೊಂದಬೇಕೆಂಬುವರಿಗೆ|| ಪ್ರಕೃತಿ ಬಂಧದಲ್ಲಿ ಸಿಲುಕಿ ಸಕಲ ವಿಷಯಗಳಲಿ ನೊಂದು ಅಕಳಂಕಚರಿತ ಹರಿಯ ಪಾದಭಕುತಿ ಬೇಕೆಂಬುವರಿಗೆ|| ಆರುಮಂದಿ ವೈರಿಗಳನು ಸೇರಲೀಸದಂತೆ ಜರಿದು ಧೀರನಾಗಿ ಹರಿಯಪಾದವ ಸೇರಬೇಕೆಂಬುವರಿಗೆ|| ಘೋರ ಸಂಸಾರಾಂಬುಧಿಗೆ ಪರಮ ಜ್ಞಾನವೆಂಬ ವಾಡೆ ಏರಿ ಮೆಲ್ಲನೆ ಹರಿಯಪಾದ ಸೇರಬೇಕೆಂಬುವರಿಗೆ|| ಹೀನ ಬುದ್ಧಿಯಿಂದ ಶ್ರೀಹಯವದನನ್ನ ಜರಿದು ತಾನು ಬದುಕರಿಯಂದಿರಲು ತೋರಿ ಕೊಟ್ಟ ಮಧ್ವಮುನಿಯ||
ದಾಸ ಸಾಹಿತ್ಯ ಪ್ರಕಾರ
ಬರೆದವರು