ಕಾಯಲಾರೆನು ಕೃಷ್ಣ ಕಂಡವರ ಬಾಗಿಲನು

ಕಾಯಲಾರೆನು ಕೃಷ್ಣ ಕಂಡವರ ಬಾಗಿಲನು

(ರಾಗ ಭೈರವಿ ಅಟತಾಳ) ಕಾಯಲಾರೆನು ಕೃಷ್ಣ ಕಂಡವರ ಬಾಗಿಲನು ನಾಯಿಕುನ್ನಿಗಳಂತೆ ಪರರ ಪೀಡಿಸುತ ||ಪ|| ಉದಯಕಾಲದಲೆದ್ದು ಸಂಧ್ಯಾವಿಧಿಯ ಬಿಟ್ಟು ಪದುಮನಾಭನ ಸ್ಮರಣೆ ಮೊದಲಿಲ್ಲದೆ ಮುದದಿ ನಿನ್ನರ್ಚಿಸದೆ ನರರ ಸದನವ ಪೊಕ್ಕು ಒದಗಿ ಸೇವೆಯ ಮಾಡಿ ಅವರ ಬಾಗಿಲನು || ಕಲ್ಲ ಕರಗಿಸಬಹುದು , ಹುರಿಗಡಲೆಯೊಳು ಅದರ ತೈಲವನು ತೆಗೆದಾದರುಣಲುಬಹುದು ಬಲ್ಲಿದವರ ಮನಸು ಮೆಚ್ಚಿಸಲರಿಯೆನೈ ಹಲ್ಲು ಕಿರಿಯುತೆ ಹಂಬಲಿಸಿ ಬಾಯಿಬಿಡುತ || ಇಂತು ನಾನಾ ಚಿಂತೆಯಲಿ ನಿನ್ನ ನೆನೆಯದೆ ಭ್ರಾಂತಿಯೆಂತೆಂಬ ಹೆಬ್ಬಲೆಯೊಳು ಸಿಲುಕಿ ಅಂತ್ಯವನು ನಾ ಕಾಣೆ ಆದರಿಸುವವರಿಲ್ಲ ಚಿಂತೆಯ ಬಿಡಿಸಯ್ಯ ಪುರಂದರವಿಠಲ ||
ದಾಸ ಸಾಹಿತ್ಯ ಪ್ರಕಾರ
ಬರೆದವರು