ಜಯತು ಕೋದಂಡರಾಮ

ಜಯತು ಕೋದಂಡರಾಮ

(ರಾಗ ನಾಟಿ ಝಂಪೆತಾಳ) ಜಯತು ಕೋದಂಡರಾಮ, ಜಯತು ದಶರಥರಾಮ ಜಯತು ಸೀತಾರಾಮ , ಜಯತು ರಘುರಾಮ , ಜಯತು ಜಯತು ||ಪ|| ತಮದೈತ್ಯನನು ಮಡುಹಿ ಮಂದರಾಚಲ ನೆಗಹಿ ಪ್ರೀತಿಯಿಂದಲಿ ತಂದು ಸಕಲ ಭೂತಳವ ಕ್ಷೇತ್ರದಿಂದುದ್ಭವಿಸಿ ಮೊರೆಯಿಡುವ ಬಾಲಕನ ಭೀತಿಯನು ಬಿಡಿಸಿ ನೆರೆಕಾಯ್ದ ರಘುರಾಮ || ಜಯತು || ಬಲಿಯೊಳ್ ದಾನವ ಮಾಡಿ ನೆಲನ ಈರಡಿ ಮಾಡಿ ಛಲದಿಂದ ಕ್ಷತ್ರಿಯರ ಕುಲವ ಹೋಗಾಡಿ ಲಲನೆಗೋಸುಗ ಬಂದ ನೆವದಿಂದ ರಾವಣನ ತಲೆಗಳನು ಚೆಂಡಾದಿ ಮೆರೆದ ರಘುರಾಮ||ಜಯತು || ವಸುದೇವಸುತನೆನಿಸಿ ವನಿತೆಯರ ವ್ರತಗೆಡಿಸಿ ಎಸೆವ ತುರಗವನೇರಿ ಮಲ್ಲರನು ಸವರಿ ವಸುಧೆಯೊಳು ಪುರಂದರವಿಠಲ ನೀ ಪಾಲಿಸೈ ಬಿಸಜಾಕ್ಷಯೋಧ್ಯಪುರವಾಸ ರಘುರಾಮ ||ಜಯತು ||
ದಾಸ ಸಾಹಿತ್ಯ ಪ್ರಕಾರ
ಬರೆದವರು