ನೀನುಪೇಕ್ಷೆಯ ಮಾಡೆ ಬೇರೆ ಗತಿ ಯಾರೆನಗೆ

ನೀನುಪೇಕ್ಷೆಯ ಮಾಡೆ ಬೇರೆ ಗತಿ ಯಾರೆನಗೆ

(ರಾಗ - ಕಲ್ಯಾಣಿ ಝಂಪೆತಾಳ) ನೀನುಪೇಕ್ಷೆಯ ಮಾಡೆ ಬೇರೆ ಗತಿ ಯಾರೆನಗೆ ನಿಗಮಗೋಚರ ಮುಕುಂದ ಗಾನರಸಲೋಲ ಆಗಮಶೀಲ ಭಕ್ತಪರಿಪಾಲ ಗೋಪಾಲ ಬಾಲಲೀಲ ||ಪ|| ಜಪತಪಾನುಷ್ಠಾನ ಜಪಿತನೆಂದೆನಿಸುವರೆ ಜಾಣತನವದರೊಳಗಿಲ್ಲ ಅಪರಿಮಿತಕರ್ಮವನು ಅನುಸರಿಸಿ ನಡೆವುದಕೆ ನಿಪುಣತ್ವ ಮೊದಲೇ ಇಲ್ಲ ಗುಪಿತದಲಿ ದಾನಧರ್ಮವ ಮಾಳ್ಪೆನೆಂದರೆ ಘನವಾದ ಧನವು ಇಲ್ಲ ಚಪಲ ನಿಪುಣತ್ವ ಜಾಣತ್ವವಿಲ್ಲದಿಹ ಸುಪವಿತ್ರ ನೀನೆ ಅಲ್ಲದಿಲ್ಲ ||೧|| ಆನೆ ಮೊಸಳೆಗೆ ಸಿಲ್ಕಿ ಅರೆಬಾಯಿ ಬಿಡುತಿರಲು ಮೌನದಲಿ ಬಂದು ಕಾಯ್ದೆ ಏ ನಾರಣ ಎಂದಡೆ ಅಜಮಿಳಗೆ ಮುಕ್ತಿಯನು ನೀನೊಲಿದು ಕರುಣಿಸಿತ್ತೆ ದಾನವೇಂದ್ರನ ಕೈಯ ಕಡುನೊಂದ ಪ್ರಹ್ಲಾದಗೆ ನೀನೊಲಿದು ಪದವನಿತ್ತೆ ದಾನವಾಂತಕ ದಿವಿಜಮುನಿವಂದಿತನೆ ನೀನು ಎನ್ನನು ಸಲಹದೇ ಬರಿದೆ ||೨|| ಈಷಣತ್ರಯದ ಬಯಲಾಸೆಯಲಿ ಮನಸೋತು ಬೇಸರಿದೆ ಮನದಿ ನೊಂದು ಹೇಸಿಕೆಯ ಸಂಸಾರಸಾಗರದೊಳಗೆ ಬಿದ್ದು ಘಾಸಿಯಾದೆ ನಾನಿಂದು ಆಸೆಯನು ಬಿಡದೆ ಕಡುಮೋಸದಲಿ ಸಿಲುಕಿರುವ ವಾಸಿಲ್ಲದವನ ಇಂದು ದಾಸನೆನಿಸಿಯೆ ಡಂಗುರವ ಹೊಯ್ಯಲು ಆದಿಕೇಶವನು ನೀನೆ ಹರಿಯೆ ದೊರೆಯೆ ||೩||
ದಾಸ ಸಾಹಿತ್ಯ ಪ್ರಕಾರ
ಬರೆದವರು