ಯಾಕೆ ಇಂಥ ದುಡುಕು ಕೃಷ್ಣಯ್ಯ

ಯಾಕೆ ಇಂಥ ದುಡುಕು ಕೃಷ್ಣಯ್ಯ

(ವರಾಳಿ ರಾಗ ಆದಿತಾಳ) ಯಾಕೆ ಇಂಥ ದುಡುಕು ಕೃಷ್ಣಯ್ಯ ನಿನ- ಗೇಕೆ ಇಂಥ ದುಡುಕು ಪಾಕಶಾಸನ ವಂದ್ಯ ಪೋಕತನಗಳಿನ್ನು ಸಾಕುಸಾಕಯ್ಯ ಕೃಷ್ಣ ||ಪ|| ಗೊಲ್ಲ ಬಾಲಕರು ನೀವೆಲ್ಲರು ಕೂಡಿಕೊಂಡು ಗುಲ್ಲು ಮಾಡದೆ ಮೊಸರೆಲ್ಲ ಸವಿದೆಯಂತೆ ಕೃಷ್ಣ ||೧|| ಪೂತನಿ ಮೊಲೆಯನ್ನು ಭೀತಿಯಿಲ್ಲದೆ ಉಂಡು ಘಾತವ ಮಾಡಿದೆ ಮಾತನಾಡಯ್ಯ ಕೃಷ್ಣ ||೨|| ದುಷ್ಟ ಕಂಸನ ನೀನು ಕಷ್ಟವಿಲ್ಲದೆ ಮಡುಹಿ ಮುಷ್ಟಿಕನ ಕೊಂದೆ ದೃಷ್ಟಿ ತಾಕೀತೆಂದು ||೩|| ನಿರ್ಜನ ಸ್ಥಳದಿ ಯಮಳಾರ್ಜುನರನ್ನು ಮಡುಹಿ ದುರ್ಜನರ ಕೊಂದೆ ಅರ್ಜುನ ಸಾರಥಿ ||೪|| ಅಂಗಿ ಟೊಪ್ಪಿಗೆ ಉಂಗುರ ಉಡಿದಾರ ಶೃಂಗರಿಸಿಕೊಂಡು ರಂಗವಿಠಲ ಬಾರೋ ||೫|||
ದಾಸ ಸಾಹಿತ್ಯ ಪ್ರಕಾರ
ಬರೆದವರು