ವಂದಿಸುವದಾದಿಯಲಿ ಗಣನಾಥನ

ವಂದಿಸುವದಾದಿಯಲಿ ಗಣನಾಥನ

( ರಾಗ ನಾಟ ಅಟ ತಾಳ) ವಂದಿಸುವದಾದಿಯಲಿ ಗಣನಾಥನ ಸಂದೇಹ ಸಲ್ಲ ಶ್ರೀ ಹರಿಯಾಜ್ಞೆಯಿದಕುಂಟು || ಹಿಂದೆ ರಾವಣ ತಾನು ವಂದಿಸದೆ ಗಜಮುಖನ ನಿಂದು ತಪವನು ಕೈದು ವರ ಪಡೆಯಲು ಒಂದು ನಿಮಿಷದಿ ಬಂದು ವಿಘ್ನವನು ಆಚರಿಸಿ ತಂದ ವರಗಳನೆಲ್ಲ ಧರೆಗೆ ಇಳಿಸಿದನು || ಅಂದಿನಾ ಬಗೆಯರಿತು ಬಂದು ಹರಿ ಧರ್ಮಜಗೆ ಮುಂದೆ ಗಣಪನ ಪೂಜಿಸೆಂದು ಪೇಳೆ ಒಂದೇ ಮನದಲಿ ಬಂದು ಪೂಜಿಸಲು ಗಣನಾಥ ಹೊಂದಿಸಿದ ನಿರ್ವಿಘ್ನದಿಂದ ರಾಜ್ಯವನು || ಇಂದು ಜಗವೆಲ್ಲ ಉಮೆನಂದನನ ಪೂಜಿಸಲು ಚೆಂದದಿಂದಲಿ ಸಕಲ ಸಿದ್ಧಿಗಳನಿತ್ತು ತಂದೆ ಸಿರಿಪುರಂದರವಿಠಲನ ಸೇವೆಯೊಳು ಬಂದ ವಿಘ್ನವ ಕಳೆದಾನಂದವನು ಕೊಡುವ ||
ದಾಸ ಸಾಹಿತ್ಯ ಪ್ರಕಾರ
ಬರೆದವರು