ವರಕವಿಗಳ ಮುಂದೆ ನರಕವಿಗಳು

ವರಕವಿಗಳ ಮುಂದೆ ನರಕವಿಗಳು

( ರಾಗ ಸೌರಾಷ್ಟ್ರ , ಅಷ್ಟ ತಾಳ) ವರಕವಿಗಳ ಮುಂದೆ ನರಕವಿಗಳು ವಿದ್ಯೆ ಮಾಡಬಾರದು , ಈ ಧರಣಿಯ ಕಲ್ಲಿಗೆ ಶರಣೆಂದು ಪೂಜೆಯ ಮಾಡಬಾರದು ಪಾಪಿಗಳಿದ್ದಲ್ಲಿಗೆ ರೂಪುಳ್ಳ ವಸ್ತುವ ತೋರಬಾರದು , ಬಹು ಕೋಪಿಗಳಿದ್ದಲ್ಲಿ ಅನುಭವ ಗೋಷ್ಠಿಯ ಮಾಡಬಾರದು ಅಡಿಸತ್ತ ಮಡಕೆಗೆ ಜೋಡಿಸಿ ಒಲೆಗುಂಡ ಹೂಡಬಾರದು , ಅತಿ ಬಡತನ ಬಂದಾಗ ನೆಂಟರ ಬಾಗಿಲ ಸೇರಬಾರದು ಹರಿಯ ಜರೆದು ಹರ ಘನನೆಂದು ನರಕಕ್ಕೆ ಸೇರಬಾರದು, ತಾ ಪರರನ್ನು ಬೈದು ಪಾತಕಕೆ ಮುನ್ನೊಳಗಾಗಬಾರದು ಮಡದಿ ನುಡಿಯ ಕೇಳಿ ಜಗಳಕೊಬ್ಬರ ಕೂಡೆ ಹೋಗಬಾರದು, ಬಾ- ಯ್ಬಡಕರು ಇದ್ದಲ್ಲಿ ವಸ್ತಿ ಬಿಡಾರವ ಮಾಡಬಾರದು ಮುಂದೆ ಭಲಾ ಎಂದು ಹಿಂದೆ ನಿಂದಿಪರನ್ನು ಕೂಡಬಾರದು , ಬಾಡ- ದಾದಿಕೇಶವನ ಚರಣದ ಸ್ಮರಣೆಯ ಮರೆಯಬಾರದು
ದಾಸ ಸಾಹಿತ್ಯ ಪ್ರಕಾರ
ಬರೆದವರು