ಹಣ್ಣು ಬಂದಿದೆ ಕೊಳ್ಳಿರೋ ನೀವೀಗ

ಹಣ್ಣು ಬಂದಿದೆ ಕೊಳ್ಳಿರೋ ನೀವೀಗ

ಹಣ್ಣು ಬಂದಿದೆ ಕೊಳ್ಳಿರೋ ನೀವೀಗ ಚೆನ್ನಬಾಲಕೃಷ್ಣನೆಂಬೊ ಚೆನ್ನಾದ ಬಾಳೆಯಹಣ್ಣು || ಪ || ಹವ್ಯಕವ್ಯದ ಹಣ್ಣು ಸವಿವ ಸಕ್ಕರೆಹಣ್ಣು ಭವರೋಗಗಳನೆಲ್ಲ ಕಳೆವ ಹಣ್ಣು ನವನೀತ ಚೋರನೆಂಬ ಯಮನ ಅಂಜಿಪ ಹಣ್ಣು ಅವನಿಯೊಳ್ ಶ್ರೀರಾಮನೆಂಬೊ ಹಣ್ಣು || ೧ || ಕೊಳೆತು ಹೋಗುವುದಲ್ಲ ಹುಳಿತು ಹೋಗುವುದಲ್ಲ ಕಳೆದು ಬಿಸಾಡಿಸಿ ಕೊಳ್ಳುವುದಲ್ಲ ಅಳೆದು ಕೊಂಬುವುದಲ್ಲ ಗಿಳಿ ಕಚ್ಚಿ ತಿಂಬೊದಲ್ಲ ಒಳಿತಾದ ಹರಿಯೆಂಬೊ ಮಾವಿನಹಣ್ಣು || ೨ || ಕೆಟ್ಟು ನಾರುವುದಲ್ಲ ಬಿತ್ತಿ ಬೆಳೆಯೋದಲ್ಲ ಕಷ್ಟದಿ ಹಣಕೊಟ್ಟು ಕೊಂಬುವುದಲ್ಲ ಸೃಷ್ಟಿಯೊಳಗೆ ನಮ್ಮ ಪುರಂದರ ವಿಟ್ಠಲ ಕೃಷ್ಣರಾಯನೆಂಬೊ ಶ್ರೇಷ್ಠವಾದ ಹಣ್ಣು || ೩ || (ಶ್ರೀ ವತ್ಸ ಜೋಶಿಯವರು ಸಂಪದದಲ್ಲಿ ಸೇರಿಸಿದ್ದು . ಅಲ್ಲೂ ನೋಡಿ http://sampada.net/forum/12309 ಇನ್ನೊಂದು ಇದೇ ತರಹ ಇದೆ ಇಲ್ಲಿ ನೋಡಿ http://www.haridasa.in/%E0%B2%A6%E0%B2%BE%E0%B2%B8%E0%B2%B8%E0%B2%BE%E0%B2%B9%E0%B2%BF%E0%B2%A4%E0%B3%8D%E0%B2%AF/%E0%B2%B9%E0%B2%A3%E0%B3%8D%E0%B2%A3%E0%B3%81-%E0%B2%AC%E0%B2%82%E0%B2%A6%E0%B2%BF%E0%B2%A6%E0%B3%86-%E0%B2%95%E0%B3%8A%E0%B2%B3%E0%B3%8D%E0%B2%B3%E0%B2%BF%E0%B2%B0%E0%B3%8B-%E0%B2%A8%E0%B3%80%E0%B2%B5%E0%B3%80%E0%B2%97/1414 ); )
ದಾಸ ಸಾಹಿತ್ಯ ಪ್ರಕಾರ
ಬರೆದವರು