ಶ್ರೀ ಗುರುಪ್ರಾಣೇಶ ದಾಸರು

ಪವನ ಸಂಭೂತ ಒಲಿದು ತವಕದಿ ಕಾಯಬೇಕು

ಪವನ ಸಂಭೂತ ಒಲಿದು ತವಕದಿ ಕಾಯಬೇಕು ಇವನಾರೋ ಎಂದು ಉದಾಸೀನ ಮಾಡದಲೆನ್ನ ||ಪಲ್ಲವಿ|| ಕಪಿಪ ಕಪಿ ಆಜ್ಞೆಯಂತೆ ಕಪಿಲನ ಪತ್ನಿಯನ್ನು ಕಪಿಗಳು ಹುಡುಕಿ ಮಿಡುಕಲು ಕಾಯ್ದೆ ಆಗಲು ||೧|| ಹರಿವೇಷಧರನೆ ನರಹರಿ ಭಕುತರ ಪೊರೆವುದಕ್ಕೆ ಹರಿಯಂತೆ ಒದಗುವೆಯೊ ನೀನು ಹರಿದಾಸನು ನಾನು ||೨||
ದಾಸ ಸಾಹಿತ್ಯ ಪ್ರಕಾರ