ಸಜ್ಜನರ ಸಂಗದೊಳಗಿರಿಸೆನ್ನ ರಂಗ

ಸಜ್ಜನರ ಸಂಗದೊಳಗಿರಿಸೆನ್ನ ರಂಗ ||ಪ||
ದುರ್ಜನರ ಸಂಗ ನಾನೊಲ್ಲೆ ಮಂಗಳಾಂಗ ||ಅ.ಪ||

ಕೂಡಿದ ಸಭೆಯಲಿ ಕುತ್ಸಿತವ ನುಡಿವನ ಸಂಗ
ನಾಡಿನೊಳಗನ್ಯಾಯವ ಮಾಡುವನ ಸಂಗ
ಬೇಡಿದರು ಕೊಡದಿರುವ ಕಡುಲೋಭಿಯ ಸಂಗ
ಮೂಢ ಮೂರ್ಖರ ಸಂಗ ಬಲು ಭಂಗ ಎಲೊ ರಂಗ ||೧||

ಗುರು ಸತಿಗೆ ಪರಸತಿಗೆ ಎರಡು ಬಗೆವರ ಸಂಗ
ಗುರು ನಿಂದೆ ಪರನಿಂದೆ ಮಾಡುವರ ಸಂಗ
ಪರಹಿತಾರ್ಥದ ಧರ್ಮವರಿಯದವರ ಸಂಗ
ಮರುಳ ಪಾಮರ ಸಂಗ ಬಲು ಭಂಗ ಎಲೊ ರಂಗ ||೨||

ಆಗಮದ ಅನ್ವಯವನರಿಯದವನ ಸಂಗ
ರಾಗದ್ವೇಷಾದಿಯಲಿ ಮುಳುಗೇಳುವನ ಸಂಗ
ಕಾಗಿನೆಲೆಯಾದಿಕೇಶವನಂಘ್ರಿ ನೆನೆಯದಿಹ
ಭಾಗವತರ ಸಂಗ ಬಲು ಭಂಗ ಎಲೊ ರಂಗ ||೩||

- ಕನಕದಾಸರು

ಗಾಳಿಗಿಕ್ಕಿದ ದೀವಿಗೆಯಂತೆ ದೇಹ



ಗಾಳಿಗಿಕ್ಕಿದ ದೀವಿಗೆಯಂತೆ ದೇಹವೆಂದು
ವೇಳೆವೇಳೆಗೆ ಶ್ರುತಿ ಸ್ಮೃತಿ ಸಾರುತಲಿವೆ
ಹಾಳುಹರಟೆಯಿಂದ ಫಲವೇನು ಇಲ್ಲ
ನಾಲಿಗೆ ಇದ್ದು ನಾರಾಯಣೆನ್ನಬಾರದೆ
ಕಾಲಕಾಲಕೆ ಹರಿಯ ಕಲ್ಯಾಣಗುಣಗಳ
ಕೇಳದವನ ಜನ್ಮವ್ಯರ್ಥ ಶ್ರೀ ರಾಮಕೃಷ್ಣ
ಹಾಳುಹರಟೆಯಿಂದ ಫಲವೇನು ಇಲ್ಲ

----ಬಡೇಸಾಹೇಬರು


 

ದಾಸ ಸಾಹಿತ್ಯ ಪ್ರಕಾರ
ಬರೆದವರು

ಗಾಣದೆತ್ತಿನಂತೆ ತಿರುಗಾಡಲಾರೆ

ಗಾಣದೆತ್ತಿನಂತೆ ತಿರುಗಾಡಲಾರೆ
ಬಂಡಿಯ ನೊಗದಂತೆ ಬೀಳಲಾರೆ
ಗಿಳಿಯಂತೆ ನಾ ನಿನ್ನ ಕೂಗಾಡಲಾರೆ
ನವಿಲಿನಂತೆ ನಾ ನಲಿದಾಡಲಾರೆ
ಪುರಂದರವಿಠಲ,  ನೀನೇ ಕರುಣಾಳು ಕಾಯೋ




 

ದಾಸ ಸಾಹಿತ್ಯ ಪ್ರಕಾರ
ಬರೆದವರು

ಗಂಡಬಿಟ್ಟ ಗಯ್ಯಾಳಿ ಕಾಣಣ್ಣ




ಗಂಡಬಿಟ್ಟ ಗಯ್ಯಾಳಿ ಕಾಣಣ್ಣ- ಅವಳ
ಕಂಡರೆ ಕಡೆಗಾಗಿ  ತಿರುಗಿಪೋಗಣ್ಣ ||ಪ||

ಊರೊಳಗೆ ತಾನು ಪರದೇಶಿಯೆನ್ನುವಳು
ಸಾರುತ ತಿರುಗುವಳು ಮನೆಮನೆಯ
ಕೇರಿಕೇರಿಗುಂಟ ಕೆಲೆಯುತ ತಿರುಗುವಳು
ನಾರಿಯಲ್ಲವೋ ಮುಕ್ಕಮಾರಿ ಕಾಣಣ್ಣ ||೧||

ಅತ್ತೆ ಮಾವನ ಕೂಡ ಅತಿಮತ್ಸರವ ಮಾಡಿ
ನೆತ್ತಿಗೆ ಮದ್ದನೆ ಊಡುವಳು
ಸತ್ಯದ ದೇವರ ಸತ್ಯ ನಿಜವಾದರೆ
ಬತ್ತಲೆ ಅಚ್ಚಂಬಿಲೂಡೇನೆಂಬುವಳು ||೨||

ಹಲವು ಜನರೊಳು ಕಿವಿಮಾತನಾಡುವಳು
ಹಲವು ಜನರೊಳು ಕಡಿದಾಡುವಳು
ಹಲವು ಜನರೊಳು ಕೂಗಿ ಬೊಬ್ಬೆಯನಿಡುವಳು
ತಳವಾರ ಚಾವಡಿಯಲಿ ಒರಲಿಹಳಣ್ಣ ||೩||


ಪರಪುರುಷರ ಕೂಡಿ ಸರಸವಾಡುತ  ಹೋಗಿ

ದಾಸ ಸಾಹಿತ್ಯ ಪ್ರಕಾರ
ಬರೆದವರು

ಗಳಿಸಿದೆನು ಗಳಿಸಿದೆನು ಘಳಿಗಿಯೊಳಗೆ

ಗಳಿಸಿದೆನು ಗಳಿಸಿದೆನು ಘಳಿಗಿಯೊಳಗೆ
ಗಳಿಸಿದಾಗಳಿಗೆ ಅಂತಃಕರಣದೊಳಗೆ ||ಧ್ರುವ||

ಗಳಿಸಿದೆನು  ಗುರುಕರುಣ, ಗಳಿಸಿದೆನು  ಗುರುಚರಣ
ಗಳಿಸಿದೆನು  ಗುರುಸ್ಮರಣ ಚಿಂತನಿಯನು ||೧||

ಗಳಿಸಿದೆನು ಗುರುಜ್ಞಾನ, ಗಳಿಸಿದೆನು  ಗುರುಮೋನ
ಗಳಿಸಿದೆನು   ಗುರುಜ್ಞಾನ ಧಾರಣವನು ||೨||

ಗಳಿಸಿದೆನು  ಇಳೆಯೊಳು ಮಹಿಪತಿ ಇಹಪರದೊಳು
ಸಾಯುಜ್ಯ ಸದ್ಗತಿಯ ಮುಕ್ತಿಗಳು ||೩||

--ಮಹಿಪತಿದಾಸರು






 

ದಾಸ ಸಾಹಿತ್ಯ ಪ್ರಕಾರ
ಬರೆದವರು

ಭಾವಾಷ್ಟ ಪುಷ್ಪಂಗಳ ದೇವಗೆ ಅರ್ಪಿಸುವ

   ಧ್ರುವ ತಾಳ
ಭಾವಾಷ್ಟ ಪುಷ್ಪಂಗಳ ದೇವಗೆ ಅರ್ಪಿಸುವ
ಭಾವನೆಯನು ಕೇಳಿ ಭಕ್ತಜನರು
ಜೀವರಿಂದ ಈ ಧರ್ಮ ಎಂದಿಗೆ ಆದದಲ್ಲ
ದೇವನಲ್ಲೇವೆ ಇಂಥ ಗುಣಗಳುಂಟು
ಭಾವಾಷ್ಟ ಪುಷ್ಪ ಗುಣವ ದೇವನಲ್ಲಿಪ್ಪವೆಂದು
ಜೀವ ತಿಳಿದರೆ ಉದ್ಧಾರ ಉಂಟು
ಜೀವರೆಂಬುವರು ಕರ್ಮ ಬದ್ಧರು ಇನ್ನು
ದೇವನು ಕರ್ಮ ತ್ರಿಗುಣಾದಿ ರಹಿತ
ಜೀವರಿಂದಲಿ ಅತ್ಯಂತ ಭೇದ ಸಾಕಾರ ಹರಿ
ಯಾವತ್ತರಾದಿ ವ್ಯಾಪ್ತ ಎಣಿ ಇಲ್ಲದ ಮೂರ್ತಿ
ಪಾವನಾಂಗ ಪಾಪನಾಶ ನಿತ್ಯತೃಪ್ತಾ

ದಾಸ ಸಾಹಿತ್ಯ ಪ್ರಕಾರ
ಬರೆದವರು

ಗೋಪಿ ಕೇಳ್ ನಿನ್ನ ಮಗ ಜಾರ

ಕೀರ್ತನೆ: 'ಗೋಪಿ ಕೇಳ್ ನಿನ್ನ ಮಗ ಜಾರ'
ರಚನೆ: ಶ್ರೀದವಿಠಲದಾಸರು


ಗೋಪಿ ಕೇಳ್ ನಿನ್ನ ಮಗ ಜಾರ ಇವ ಚೋರ ಸುಕುಮಾರ   || ಪ ||
ಮುದದಿ ಮುಕುಂದ ಸದನಕಾ ಬಂದಾ
ದಧಿಯ ಮೀಸಲು ಬೆಣ್ಣೆ ತಿಂದ ನಿನ್ನಾ ಕಂದಾ ಆನಂದಾ

ಮಾರನ ಪಿತ ತಾ ಮನೆಯೊಳು ಪೊಕ್ಕ
ಹಿಡಿಯ ಹೋದರೆ ಕೈಗೆ ಸಿಕ್ಕ ನೋಡಿ ನಕ್ಕ ಭಾರಿ ಠಕ್ಕ   || 1 ||

ಹರೆಯದ ಪೋರಿ ಜಗದ ಕಣ್ಗೋರಿ(?)
ಭರದಿಂದ ಸೀರೆಯ ಸೆಳೆದಾ ಕರವ ಪಿಡಿದಾ ಮಾನ ಕಳೆದಾ   || 2 ||

ಬಹಳ ದಿನವಾಯ್ತು ಪೇಳುವುದ್ಹ್ಯಾಂಗೆ

ದಾಸ ಸಾಹಿತ್ಯ ಪ್ರಕಾರ

ಯಾಕೆ ಬಾಗಿಲ ಹಾಕಿರುವೆ ಕೋಕಿಲೇಶ್ವರಿ ವಾಣಿ

'ಯಾಕೆ ಬಾಗಿಲ ಹಾಕಿರುವೆ ಕೋಕಿಲೇಶ್ವರಿ ವಾಣಿ'
ರಚನೆ: ಶ್ರೀ ವಾದಿರಾಜ ಸ್ವಾಮಿಗಳು


ಯಾಕೆ ಬಾಗಿಲ ಹಾಕಿರುವೆ ಕೋಕಿಲೇಶ್ವರಿ ವಾಣಿ   || ಪ ||
ಆರು ನಾನರಿಯೆ ನೀ ಸರಿರಾತ್ರಿಯಲಿ ಬಂದೀ   || ಅ ||

ನೀರೊಳು ಮುಳುಗಿ ನಿಗಮಚೋರನ ಕೊಂದ ನೀರಜಾಕ್ಷನೆ ಭಾಮೆ ನಾನು
ನಾರುವ ಮೈಯ್ಯ ಎನ್ನೊಳು ತೋರದೆ ಸಾರಿ ದೂರ ನೀ ಪೋಗೋ ರಂಗ   || 1 ||

ಮಂದರಗಿರಿಯನು ಬೆನ್ನೊಳಗಿಟ್ಟ೦ತ ಸುಂದರವದನನೇ ಭಾಮೆ ನಾನು
ಇಂದು ನಿನಗೆ ತಕ್ಕ ಭಾರಂಗಳಿಲ್ಲವಯ್ಯ ಸಿಂಧುವಿನೊಳಗೆ ಪೋಗೋ ರಂಗ   || 2 ||

ದಾಸ ಸಾಹಿತ್ಯ ಪ್ರಕಾರ

ಎಷ್ಟು ಸಾಹಸವಂತ ನೀನೇ ಬಲವಂತ

'ಎಷ್ಟು ಸಾಹಸವಂತ ನೀನೇ ಬಲವಂತ'
ರಚನೆ: ಶ್ರೀವಾದಿರಾಜ ಯತಿಗಳು


ಎಷ್ಟು ಸಾಹಸವಂತ ನೀನೇ ಬಲವಂತಾ ದಿಟ್ಟ ಮೂರುತಿ ಭಳಿ ಭಳಿರೇ ಹನುಮಂತಾ   || ಪ ||
ಅಟ್ಟುವ ಖಳರೆದೆ ಮೆಟ್ಟಿ ತುಳಿದು ತಲೆ ಕುಟ್ಟಿ ಚಂಡಾಡಿದ ದಿಟ್ಟ ನೀನಹುದೋ

ರಾಮರಪ್ಪಣೆಯಿಂದ ಶರಧಿಯ ದಾಟಿ ಆ ಮಹಾ ಲಂಕೆಯ ಕಂಡೆ ಕಿರೀಟಿ
ಸ್ವಾಮಿ ಕಾರ್ಯವನು ಪ್ರೇಮದಿ ನಡೆಸಿದಿ ಈ ಮಹಿಯೊಳು ನಿನಗಾರೈ ಸಾಟಿ
ದೂರದಿಂದಸುರನ ಪುರವನ್ನು ನೋಡಿ ಭರದಿ ಶ್ರೀರಾಮರ ಸ್ಮರಣೆಯ ಮಾಡಿ
    [ ರಾಮಾಯ ರಾಮಭದ್ರಾಯ ರಾಮಚಂದ್ರಾಯ ವೇಧಸೆ ರಘುನಾಥಾಯ ನಾಥಾಯ ಸೀತಾಯಪತಯೇ ನಮಃ ]

ದಾಸ ಸಾಹಿತ್ಯ ಪ್ರಕಾರ