ಶ್ರೀರಂಗವಿಠಲನ ಶ್ರೀ ಮಕುಟಕೆ ಶರಣು

( ನಾಟಿ ರಾಗ ಖಂಡಛಾಪು ತಾಳ) ಶ್ರೀರಂಗವಿಠಲನ ಶ್ರೀ ಮಕುಟಕೆ ಶರಣು ||ಪ|| ಶಿರದಲೊಪ್ಪುವ ನೀಲಕುಂತಳಕೆ ಶರಣು ಸಿರಿ ಸಹೋದರನರ್ಧದವಳಿಗೆ ಶರಣು ||ಅ.ಪ|| ಸೊಂಪು ನೋಟದ ಚೆಲುವ ಸೋಗೆಗಣ್ಣಿಗೆ ಶರಣು ಸಂಪಿಗೆಯ ಕುಸುಮಸಮ ನಾಸಿಕಕೆ ಶರಣು ಗುಂಪುರತ್ನದ ಕರ್ಣಕುಂಡಲಗಳಿಗೆ ಶರಣು ಇಂಪುದರ್ವಣನಿಭ ಕಪೋಲಗಳಿಗೆ ಶರಣು ||೧|| ಕುಂದಕುಟ್ಮಲ ಪೋಲ್ವ ದಂತಪಕ್ತಿಗೆ ಶರಣು ಅಂದವಾಗಿರುವ ಬಿಂಬೋಷ್ಠಕೆ ಶರಣು ಚಂದ್ರಿಕಾನಿಭ ಮುದ್ದು ಮಂದಹಾಸಕೆ ಶರಣು ನಂದಗೋಪನ ಮುದ್ದು ಕಂದನಿಗೆ ಶರಣು ||೨|| ಅಬ್ಜನಾಭನ ದಿವ್ಯ ಕಂಬು ಕಂಠಕೆ ಶರಣು ಅಬ್ಜಮುಖಿಯಿರುವ ವಕ್ಷಸ್ಥಳಕೆ ಶರಣು ಕುಬ್ಜೆಯ ಡೊಂಕ ತಿದ್ದಿದ ಭುಜಗಳಿಗೆ ಶರಣು ಅಬ್ಜಜಾಸನನ ಪೆತ್ತ ನಾಭಿಗೆ ಶರಣು ||೩|| ರನ್ನಗಂಟೆಗಳಿರುವ ನಿನ್ನ ಕಟಿಗೆ ಶರಣು
ದಾಸ ಸಾಹಿತ್ಯ ಪ್ರಕಾರ
ಬರೆದವರು

ಪಾಲಿಸಯ್ಯ ಸ್ವಾಮಿ ಕೃಷ್ಣ ಪಾಲಿಸಯ್ಯ ಎನ್ನ ನೀನು

ಪಾಲಿಸಯ್ಯ ಸ್ವಾಮಿ ಕೃಷ್ಣ ಪಾಲಿಸಯ್ಯ ಎನ್ನ ನೀನು ಪಾಲಿಸಯ್ಯ ಭಾಗ್ಯವಿತ್ತು ಭಕ್ತವತ್ಸಲ ನಿತ್ಯಪೂರ್ಣ ಮಂಗಲವಿತ್ತು ನಿತ್ಯದಿ ಕಲ್ಯಾಣವಿತ್ತು ನಿತ್ಯ ಸಲಹೊ ವ್ಯಾಸಮುನಿವಂದ್ಯ ಗೋಪಿನಾಥನೆ ತುರುಬಿನ ಮ್ಯಾಲೆ ತುರುಬಿದ ಮೊಲ್ಲೆ ಮಲ್ಲಿಗೆ ಕುಸುಮಗಳ ರಂಗಾ ಕೊರಳಲ್ಲಿ ಕಂಠೀಸರ ವನಮಾಲೆ ವರಕಲ್ಪ ತರುವನೆನ್ನೀ ರಂಗಾ ಕರದಲ್ಲಿ ವೇಣು ಬೆರಳಲ್ಲಿ ಮೀಟುತ ಮರಿದುಂಬಿ ಝೇಂಕಾರ ರಂಗಾ ಸರಿಗಮಪದನಿಸ ಸನಿದಪಮಗರಿಸ ಅಧರದಲೂದುತಿರೆ ರಂಗಾ ಸಿರಿಯರಸನು ಸಿರಿಪತಿ ರಂಗವಿಠಲ ಸರಸದಿ ವೇಣುನಾದ ಮಾಡಿದ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಎನ್ನ ಮನ ವಿಷಯಂಗಳಲಿ ಮುಣುಗಿತೊ

ಎನ್ನ ಮನ ವಿಷಯಂಗಳಲಿ ಮುಣುಗಿತೊ ಎನ್ನ ತನುವು ವೃದ್ಧಾಪ್ಯ ಐದಿತೊ ಅಂತಕರ ಕರೆ ಬಾಹೊ ಹೊತ್ತಾಯಿತೊ ಕಾಲ ವಿಳಂಬವಿನಿತಿಲ್ಲವಯ್ಯ ವ್ಯಾಳೆ ಅರಿತು ಬಿನ್ನಹ ಮಾಡಿದೆ ಹೀಗೆ ತರಳರ ಬಿಡುವ ತಾಯಿಗಳುಂಟೆ , ನೀ ಕರುಣಾನಿಧಿಯೆಂಬ ಬಿರುದು ಸಲ್ಲಿಸು ದೇವ ಕರುಣಾಕರ ಸಿರಿರಂಗವಿಠಲರೇಯ , ನೀ ಕರುಣಾನಿಧಿಯೆಂಬ ಬಿರುದು ಸಲ್ಲಿಸು ದೇವ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಅನಂತಕಾಲದಲ್ಲಿ ಯಾವ ಪುಣ್ಯದಲ್ಲಿ

ಅನಂತಕಾಲದಲ್ಲಿ ಯಾವ ಪುಣ್ಯದಲ್ಲಿ ಎನ್ನ ಮನ ನಿನ್ನಲ್ಲಿ ಎರಗಿಸೊ ಎನ್ನ ಮನವನು ನಿನ್ನ ಚರಣದೊಳೊಮ್ಮೆ ಇಟ್ಟು ಸಲಹೊ ರಂಗವಿಠಲ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಹರಿಭಕುತನಾದವ ಅರಿದು ಪಾಪವ ಮಾಡುವುದಿಲ್ಲ

ಹರಿಭಕುತನಾದವ ಅರಿದು ಪಾಪವ ಮಾಡುವುದಿಲ್ಲ ಅರಿಯದೆ ಮಾಡಿದರೆ ಹರಿಯು ಎಣಿಸುವುದಿಲ್ಲ ಶರಣು ಬಂದವನ ರವಿಯತನಯನ ನೋಡು ಮರೆಯದೆ ಭಜಿಸು ರಂಗವಿಠಲರೇಯನ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಸಾಲಿಗ್ರಾಮ ವೃಂದಾವನದಲಿ ಇಪ್ಪಂತೆ

ಸಾಲಿಗ್ರಾಮ ವೃಂದಾವನದಲಿ ಇಪ್ಪಂತೆ ಎನ್ನ ಮನವನು ಬಿಡದಿಹ ಹರಿ ಜನ್ನರ ಜನ್ನ ನರಹರಿ ಗೋವಿಂದ ಎನ್ನ ಮನವನು ಬಿಡದಿಹ ಪುಂಡರೀಕ ಮನ ಪಿರಿಯಾನೆಯಯ್ಯ ಪಂಡರಂಗಿಪುರೀಪತಿ ಸಿರಿರಂಗವಿಠಲ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಸರಸಿಜನಾಭನೆ ಸೆರಗೊಡ್ಡಿ ಬೇಡುವೆ

( ಕಾಂಬೋಧಿ ರಾಗ ಆದಿತಾಳ) ಸರಸಿಜನಾಭನೆ ಸೆರಗೊಡ್ಡಿ ಬೇಡುವೆ ದುರಿತಗಳೆಲ್ಲವ ತರಿದು ವರವಿತ್ತು ಕರುಣಿಸೋ ||ಪ|| ಕರುಣಾಸಾಗರ ನಿನ್ನ ಚರಣವ ನಂಬಿದೆ ಪರಮ ಪಾವನ ನಿನ್ನ ಶರಣನ ಪೊರೆಯೆಂದು ||೧|| ಈಶವಿನುತ ನಿನ್ನ ವಾಸಿಯ ಪೊಗಳುವೆ ದಾಸ ಎಂದೆನ್ನನು ಗಾಸಿಮಾಡದೆ ಕಾಯೊ ||೨|| ಬಾರಿಬಾರಿಗೆ ಬರುವ ದಾರಿದ್ರ್ಯ ದುಃಖವ ದೂರಗೈಸುವಂಥ ದಾರಿ ತೋರಿಸೆಂದು ||೩|| ಕಂತುಪಿತನೆ ಎನ್ನ ಅಂತರಂಗದಿ ನಿನ್ನ ಸಂತತ ನೆನೆವಂತೆ ಚಿಂತನೆ ನಿಲಿಸೆಂದು ||೪|| ಮಂಗಳಾತ್ಮಕನೆ ಶ್ರೀರಂಗವಿಟ್ಠಲ ಭು- ಜಂಗಶಯನ ನಿನ್ನ ಹಿಂಗದೆ ಭಜಿಪೆನು ||೫||
ದಾಸ ಸಾಹಿತ್ಯ ಪ್ರಕಾರ
ಬರೆದವರು

ಶ್ರೀ ರಾಮ ನಿನ್ನ ಪಾದವ ತೋರೋ

(ಪೂರ್ವಿ ರಾಗ ಖಂಡ ಛಾಪು ತಾಳ) ಶ್ರೀ ರಾಮ ನಿನ್ನ ಪಾದವ ತೋರೋ ಮೋಹನ್ನ ಗುಣಧಾಮ ನಿನ್ನ ಮೋಹದ ಪಾದವ ||ಪ|| ವರಗುಣಜಾಲ ಸುರಗುಣಲೋಲ ಕರುಣಾಲವಾಲ ತರುಣೀ ಪರಿಪಾಲ ||೧|| ಅಜಭವಪೂಜಿತ ಗಜವರಭಾವಿತ ಸುಜನರ ಸೇವಿತ ತ್ರಿಜಗವಂದಿತ ||೨|| ಅಂಗಜ ಜನಕ ವಿಹಂಗತುರಂಗ ತುಂಗವಿಕ್ರಮ ಶ್ರೀರಂಗವಿಠಲ ||೩||
ದಾಸ ಸಾಹಿತ್ಯ ಪ್ರಕಾರ
ಬರೆದವರು

ಮುಂದೆ ಕೆಟ್ಟು ಬಂದವರ

ಮುಂದೆ ಕೆಟ್ಟು ಬಂದವರ ಹಿಂದಕೆ ಹಾಕಿಕೊಂಡ ಬಳಿಕ ಬಂದ ಗುಣದೋಷಗಳ ಎಣಿಸುವರೆ ಎಲೆ ದೇವಾ ! ಅಂದವಲ್ಲ ನಿನ್ನ ಘನತೆಗೆ ತಂದೆತಾಯಿಗಳು ತಮ್ಮ ಕಂದನವಗುಣಗಳೆಣಿಸುವರೆ ? ಎಂದೆಂದಿಗೆನ್ನ ಉದ್ಧರಿಸಬೇಕೆಲೆ ದೇವ ಸಂದೇಹವ್ಯಾತಕೆ ನಮೋ ರಂಗವಿಠಲಯ್ಯ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಭವವೆಂಬ ಅಡವಿಯಲ್ಲಿ ತಾಪತ್ರಯದಲ್ಲಿ ಸಿಲುಕಿ

ಭವವೆಂಬ ಅಡವಿಯಲ್ಲಿ ತಾಪತ್ರಯದಲ್ಲಿ ಸಿಲುಕಿ ಭಯಗೊಳ್ಳದಂತೆ ಗೆಲ್ಲುವುದಕೆ ಶ್ರೀಹರಿನಾಮ ಹೊರತಾಗಿ ಮತ್ತುಂಟೆ ಎನ್ನ ಮನವ ನಿನ್ನ ಚರಣದಲ್ಲಿಟ್ಟು ಸಲಹೊ ನಮೋ ರಂಗವಿಠಲ
ದಾಸ ಸಾಹಿತ್ಯ ಪ್ರಕಾರ
ಬರೆದವರು