ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ

ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ

ಬರೆದದ್ದು : ಕನಕದಾಸರು ರಾಗ : ಅಠಾಣ ತಾಳ : ಅಟ ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ || ಪಲ್ಲವಿ || ಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೆ || ಅನುಪಲ್ಲವಿ || ಪರಮಪದದೊಳಗೆ ವಿಷಧರನ ತಲ್ಪದಲಿ ನೀ ಸಿರಿಸಹಿತ ಕ್ಷೀರವಾರಿಧಿಯೊಳಿರಲು ಕರಿರಾಜ ಕಷ್ಟದಲಿ ಆದಿಮೂಲ ಎಂದು ಕರೆಯಲಾಕ್ಷಣ ಬಂದು ಒದಗಿದೆಯೊ ನರಹರಿಯೇ || ೧ || ಕಡುಕೋಪದಿಂ ಖಳನು ಖಡುಗ ಕೈಯಲಿ ಪಿಡಿದು ನಿ ನ್ನೊಡೆಯನೆಲ್ಲಿಹನೆಂದು ಕಂಬವನು ಜಡಿಯೆ ದೃಢಭಕುತಿಯಿಂ ಶಿಶುವು ಬಿಡದೆ ನಿನ್ನನು ಭಜಿಸೆ ಸಡಗರದಿ ಸ್ತಂಭದಿಂದೊಡೆದೆ ನರಹರಿಯೆ || ೨ || ಯಮಸುತನ ರಾಣಿಗಕ್ಷಯವಸನವನಿತ್ತೆ ಸಮಯದಲಿ ಅಜಮಿಳನ ಪೊರೆದೆ ಸಮಾಯಾಸಮಯವುಂಟೆ ಭಕ್ತವತ್ಸಲ ನಿನಗೆ ಕಮಾಲಾಕ್ಷ ಕಾಗಿನೆಲೆಯಾದಿ ಕೇಶವನೆ || ೩ ||
ದಾಸ ಸಾಹಿತ್ಯ ಪ್ರಕಾರ
ಬರೆದವರು