ಅಡಿಗೆಯನು ಮಾಡಬೇಕಣ್ಣ, ನಾವೀಗ ಸುಜ್ಞಾನದ

ಅಡಿಗೆಯನು ಮಾಡಬೇಕಣ್ಣ, ನಾವೀಗ ಸುಜ್ಞಾನದ

ಅಡಿಗೆಯನು ಮಾಡಬೇಕಣ್ಣ, ನಾವೀಗ ಸುಜ್ಞಾನದ ಅಡಿಗೆಯನು ಮಾಡಬೇಕಣ್ಣ ||ಪ|| ಅಡಿಗೆಯನು ಮಾಡಬೇಕಣ್ಣ , ಮದಿಸಬೇಕು ಮದಗಳನ್ನು ಒಡೆಯನಾಜ್ಞೆಯಿಂದ ಒಳ್ಳೆ ಸಡಗರದಿ ಈ ಮನೆಯ ಸಾರಿಸಿ ||ಅ.ಪ|| ತನ್ನ ಗುರುವನು ನೆನೆಯಬೇಕಣ್ಣ , ತನುಭಾವವೆಂಬ ಭಿನ್ನ ಕಶ್ಮಲವಳಿಯಬೇಕಣ್ಣ ಒನಕೆಯಿಂದ ಕುಟ್ಟಿ ಕೇರಿ ತನಗೆ ತಾನೆ ಆದ ಕೆಚ್ಚ - ನನುವರಿತು ಇಕ್ಕಬೇಕು ಅರಿವರ್ಗವೆಂಬ ತುಂಟರಳಿಸಿ ||೧|| ತತ್ವಭಾಂಡವ ತೊಳೆಯಬೇಕಣ್ಣ , ಸತ್ಯಾತ್ಮನಾಗಿ ಅರ್ತಿ ಅಕ್ಕಿಯ ಮಥಿಸಬೇಕಣ್ಣ ಕತ್ತರಿ ಮನವೆಂಬ ಹೊಟ್ಟನ್ನು ಎತ್ತಿ ಒಲೆಗೆ ಹಾಕಿ ಇನ್ನು ಹೊತ್ತಿಕೊಂಡಿಹ ಮಮತೆಯನ್ನು ಎತ್ತಿ ಹೆಸರ ಹಿಂಗಿಸುತಲಿ ||೨|| ಜನನ ಸೊಂಡಿಗೆ ಹುರಿಯಬೇಕಣ್ಣ , ನಿಜವಾಗಿ ನಿಂತು ತನುವ ತುಪ್ಪವ ಕಾಸಬೇಕಣ್ಣ ಕನಕಗಿರಿ ನೆಲೆಯಾದಿ ಕೇಶವದಾಸ , ಕನಕನ ಕಟ್ಟಳೆಯೊಳು ನಿಂತು ಸುಖದ ಪಾಕವನು ಚೆಂದದಿಂ ಸವಿದುಣ್ಣಲಿಕ್ಕೆ ||೩||
ದಾಸ ಸಾಹಿತ್ಯ ಪ್ರಕಾರ
ಬರೆದವರು