ಆದದ್ದೆಲ್ಲ ಒಳಿತೇ ಆಯಿತು

ಆದದ್ದೆಲ್ಲ ಒಳಿತೇ ಆಯಿತು

ಪಲ್ಲವಿ: ಆದದ್ದೆಲ್ಲ ಒಳಿತೇ ಆಯಿತು ನಮ್ಮ ಶ್ರೀಧರನ ಸೇವೆಗೆ ಸಾಧನ ಸಂಪತ್ತಾಯಿತು ಚರಣಗಳು: ದಂಡಿಗೆ ಬೆತ್ತ ಹಿಡಿಯುವುದಕ್ಕೆ ಮಂಡೆ ಮಾಚಿ ನಾಚುತಿದ್ದೆ ಹೆಂಡತಿ ಸಂತತಿ ಸಾವಿರವಾಗಲಿ ದಂಡಿಗೆ ಬೆತ್ತ ಹಿಡಿಸಿದಳಯ್ಯ ಗೋಪಾಳ ಬುಟ್ಟಿ ಹಿಡಿಯುವುದಕ್ಕೆ ಭೂಪತಿಯಂತೆ ಗರ್ವಿಸುತಿದ್ದೆ ಆ ಪತ್ನಿ ಕುಲ ಸಾವಿರವಾಗಲಿ ಗೋಪಾಳ ಬುಟ್ಟಿ ಹಿಡಿಸಿದಳಯ್ಯ ತುಳಸಿ ಮಾಲೆಯ ಹಾಕುವುದಕ್ಕೆ ಅರಸನಾಗಿ ನಾಚುತಿದ್ದೆ ಸರಸಿಜಾಕ್ಷ ಪುರಂದರ ವಿಟ್ಠಲನು ತುಳಸಿ ಮಾಲೆ ಹಾಕಿಸಿದನಯ್ಯ
ದಾಸ ಸಾಹಿತ್ಯ ಪ್ರಕಾರ
ಬರೆದವರು