ಇಂದು ಎನಗೆ ಗೋವಿಂದ

ಇಂದು ಎನಗೆ ಗೋವಿಂದ

ಇಂದು ಎನಗೆ ಗೋವಿಂದ ನಿನ್ನಯ ಪಾದಾರ ವಿಂದವ ತೋರೋ ಮುಕುಂದನೆ |ಪ| ಸುಂದರ ವದನನೆ ನಂದಗೋಪನ ಕಂದ ಮಂದರೋದ್ಧಾರ ಆನಂದ ಇಂದಿರಾ ರಮಣ |ಅಪ| ನೊಂದೆನಯ್ಯ ಭವಬಂಧನದೊಳು ಸಿಲುಕಿ ಮುಂದೆ ದಾರಿ ಕಾಣದೆ ಕುಂದಿದೆ ಜಗದೊಳು ಕಂದನಂತೆಂದೆನ್ನ ಕು೦ದುಗಳೆಣಿಸದೆ ತಂದೆ ಕಾಯೊ ಕೃಷ್ಣ ಕಂದರ್ಪಜನಕನೆ |೧| ಮೂಢತನದಿ ಬಹು ಹೇಡಿ ಜೀವ ನಾನಾಗಿ ದೃಢಭಕುತಿಯನು ಮಾಡಲಿಲ್ಲವೊ ಹರಿಯೆ ನೋಡಲಿಲ್ಲವೊ ನಿನ್ನ ಪಾಡಲಿಲ್ಲವೊ ಮಹಿಮೆ ಗಾಡಿಕಾರ ಕೃಷ್ಣ ಬೇಡಿಕೊಂಬೆನೊ ನಿನ್ನ |೨| ಧಾರುಣಿಯೊಳು ಭೂಭಾರಜೀವ ನಾನಾಗಿ ದಾರಿತಪ್ಪಿ ನಡೆದೆ ಸೇರಿದೆ ಕುಜನರ ಆರೂ ಕಾಯುವರಿಲ್ಲ ಸೇರಿದೆ ನಿನಗಯ್ಯಾ ಧೀರವೇಣುಗೋಪಾಲ ಪಾರುಗಾಣಿಸೊ ಹರಿಯೆ |೩|
ದಾಸ ಸಾಹಿತ್ಯ ಪ್ರಕಾರ