ಎಲ್ಲಿರುವನೋ ರಂಗನೆಂಬ ಸಂಶಯ ಬೇಡ

ಎಲ್ಲಿರುವನೋ ರಂಗನೆಂಬ ಸಂಶಯ ಬೇಡ

( ರಾಗ ಕಲ್ಯಾಣಿ. ಅಟ ತಾಳ) ಎಲ್ಲಿರುವನೋ ರಂಗನೆಂಬ ಸಂಶಯ ಬೇಡ ಎಲ್ಲಿ ಭಕ್ತರು ಕರೆದರಲ್ಲೆ ಒದಗುವನು ||ಪ|| ತರಳ ಪ್ರಹ್ಲಾದ ಶ್ರೀಹರಿ ವಿಶ್ವಮಯನೆಂದು ಬರೆದೋದಲವನ ಪಿತ ಕೋಪದಿಂದ ಸ್ಥಿರವಾದಡಿ ಕಂಭದೊಳು ತೋರು ತೋರೆನಲು ಭರದಿ ಬರಲದಗೆ ವೈಕುಂಠ ನೆರೆ ಮನೆಯೆ || ಪಾಪ ಕರ್ಮವ ಮಾಡಿದಜಮಿಳನ ಯಮಭಟರು ಕೋಪದಿಂದೆಳೆಯುತಿರೆ ಭೀತಿಯಿಂದ ತಾ ಪುತ್ರನನು ಕರೆಯ ಕೇಳಿ ರಕ್ಷಿಸೆ ಶ್ವೇತ ದ್ವೀಪವೀ ಧರೆಗತಿ ಸಮೀಪದಲ್ಲಿಹುದೆ || ಕರಿರಾಜನು ನೆಗಳು ನುಂಗುತಿರೆ ಭಯದಿಂದ ಮೊರೆಯಿಡಲು ಕೇಳಿ ಅತಿ ತ್ವರಿತದಿಂದ ಕರುಣದಲಿ ಬಂಧನವ ಬಿಡಿಸಲಾಗಜರಾಜ ನಿರುವ ಸರಸಿಗೆ ಅನಂತಾಸನವು ಮುಮ್ಮನೆಯೆ || ಕುರುಪತಿಯು ದ್ರೌಪದಿಯ ಸೀರೆಯನು ಸೆಳೆಯುತಿರೆ ತರುಣಿ ಹಾ ಕೃಷ್ಣ ಎಂದೊದರೆ ಕೇಳಿ ಭರದಿಂದ ಅಕ್ಷಯಾಂಬರವಿತ್ತ ಹಸ್ತಿನಾ- ಪುರಿಗು ದ್ವಾರಾವತಿಗು ಕೂಗಳತೆಯೆ || ಅಣು ಮಹತ್ತುಗಳಲ್ಲಿ ಪರಿಪೂ‍ರ್ಣೆಂದೆನಿಸಿ ಗಣನೆಯಿಲ್ಲದ ಮಹಾಮಹಿಮನೆನಿಪ ಘನಕೃಪಾನಿಧಿ ನಮ್ಮ ಪುರಂದರ ವಿಟ್ಠಲನು ನೆನೆದವರ ಮನದೆಲ್ಲ ಇಹನೆಂಬ ಬಿರುದಿರಲು ||
ದಾಸ ಸಾಹಿತ್ಯ ಪ್ರಕಾರ
ಬರೆದವರು