ಕೈಲಾಸವಾಸ ಗೌರೀಶ ಈಶ

ಕೈಲಾಸವಾಸ ಗೌರೀಶ ಈಶ

ರಚನೆ -ವಿಜಯದಾಸರು ಕೈಲಾಸವಾಸ ಗೌರೀಶ ಈಶ ತೈಲಧಾರೆಯಂತೆ ಮನಸು ಕೊಡೊ ಹರಿಯಲ್ಲಿ, ಶಂಭೋ || ಪಲ್ಲವಿ|| ಅಹೋರಾತ್ರಿಯಲ್ಲಿ ನಾನು ಅನುಚರಾಗ್ರಣಿಯಾಗಿ ಮಹಿಯೊಳಗೆ ಚರಿಸಿದೆನೊ ಮಹದೇವನೆ ಅಹಿ ಭೂಷಣನೆ ಎನ್ನ ಅವಗುಣಗಳೆಣಿಸದಲೆ ವಿಹಿತ ಧರ್ಮದಿ ವಿಷ್ಣು ಭಕುತಿಯನು ಕೊಡೊ, ಶಂಭೋ ||೧|| ಮನಸು ಕಾರಣವಲ್ಲ ಪಾಪಪುಣ್ಯಕ್ಕೆಲ್ಲ ಆನಲಾಕ್ಷ ನಿನ್ನ ಪ್ರೇರಣೆಯಿಲ್ಲದೆ ದನುಜ ಗಜ ಮದಹಾರಿ ದಂಡ ಪ್ರಣಾಮವ ಮಾಳ್ಪೆ ಮಣಿಸೊ ಈ ಶಿರವ ಸಜ್ಜನ ಚರಣ ಕಮಲದಲಿ, ಶಂಭೋ ||೨|| ಭಾಗೀರಥಿ ಧರನೆ ಭಯವ ಪರಿಹರಿಸಯ್ಯ ಲೇಸಾಗಿ ನೀ ಸಲಹೊ ಸಂತತ ಶರ್ವ ದೇವ ಭಾಗವತ ಜನ ಪ್ರಿಯ ವಿಜಯವಿಠಲನಂಘ್ರಿ ಜಾಗು ಮಾಡದೆ ಭಜಿಪ ಭಾಗ್ಯವನು ಕೊಡೊ, ಶಂಭೋ ||೩||
ದಾಸ ಸಾಹಿತ್ಯ ಪ್ರಕಾರ
ಬರೆದವರು