ಗೊಲ್ಲತಿಯರೆಲ್ಲ ಕೂಡಿ ಎನ್ನ ಮೇಲೆ ಇಲ್ಲದ ಸುದ್ದಿ ಪುಟ್ಟಿಸಿ

ಗೊಲ್ಲತಿಯರೆಲ್ಲ ಕೂಡಿ ಎನ್ನ ಮೇಲೆ ಇಲ್ಲದ ಸುದ್ದಿ ಪುಟ್ಟಿಸಿ

(ಮೋಹನರಾಗ ಛಾಪುತಾಳ) ಗೊಲ್ಲತಿಯರೆಲ್ಲ ಕೂಡಿ ಎನ್ನ ಮೇಲೆ ಇಲ್ಲದ ಸುದ್ದಿ ಪುಟ್ಟಿಸಿ ಕಳ್ಳನೆಂದು ದೂರುತಾರೆ ಗೋಪಿ ಎನ್ನ ಕೊಲ್ಲಬೇಕೆಂಬ ಬಗೆಯೆ ||ಪ|| ಹರವಿಯ ಹಾಲು ಕುಡಿಯಲು ಎನ್ನ ಹೊಟ್ಟೆ ಕೆರೆಯೇನೆ ಹೇಳಮ್ಮಯ್ಯ ಕರೆದು ಅಣ್ಣನ ಕೇಳಮ್ಮ ಉಂಟಾದರೆ ಒರಳಿಗೆ ಕಟ್ಟಮ್ಮಯ್ಯ ||೧|| ಮೀಸಲು ಬೆಣ್ಣೆಯನು ಮೆಲುವುದದು ಎನಗೆ ದೋಷವಲ್ಲವೇನಮ್ಮಯ್ಯ ಆಸೆ ಮಾಡಿದರೆ ದೇವರು ಕಣ್ಣ ಮೋಸದಿ ಕುಕ್ಕೋನಮ್ಮಯ್ಯ ||೨|| ಅಟ್ಟವನೇರಿ ಹಿಡಿವುದು ಅದು ಎನಗೆ ಕಷ್ಟವಲ್ಲವೆ ಹೇಳಮ್ಮಯ್ಯ ನೀ ಕೊಟ್ಟ ಹಾಲು ಕುಡಿಯಲಾರದೆ ನಾನು ಬಟ್ಟಲೊಳಗಿಟ್ಟು ಪೋದೆನೆ ||೩|| ಪುಂಡುತನ ಮಾಡಲು ನಾನು ದೊಡ್ಡ ಗಂಡಸೇನೆ ಹೇಳಮ್ಮಯ್ಯ ಎನ್ನ ಕಂಡವರು ದೂರುತಾರೆ ಗೋಪಮ್ಮ ನಾ ನಿನ್ನ ಕಂದನಲ್ಲವೇನೆ ಅಮ್ಮಯ್ಯ ||೪|| ಉಂಗುರದ ಕರದಿಂದ ಗೋಪಮ್ಮ ತನ್ನ ಶೃಂಗಾರದ ಮಗನೆತ್ತಿ ರಂಗವಿಠಲನ ಪಾಡಿ ಉಡುಪಿನ ಉ- ತ್ತುಂಗ ಕೃಷ್ಣನ ತೂಗಿದಳು ||೫||
ದಾಸ ಸಾಹಿತ್ಯ ಪ್ರಕಾರ
ಬರೆದವರು