ಗೋಕುಲರನ್ನ ಏಕೆನ್ನ ಕೈ ಬಿಡುವೆ

ಗೋಕುಲರನ್ನ ಏಕೆನ್ನ ಕೈ ಬಿಡುವೆ

( ರಾಗ ಅಸಾವೇರಿ ಆದಿತಾಳ) ಗೋಕುಲರನ್ನ ಏಕೆನ್ನ ಕೈ ಬಿಡುವೆ ||ಪ|| ನಾನು ಮಾಡಿದ ಪಾಪ ನರಕಸಾಧನವಾಯ್ತು ಏನು ಗತಿಯೊ ಎನಗೆ ಭಕ್ತರ ಕಾಮಧೇನು ಮಾಡುವುದೇನಯ್ಯ ಕೃಷ್ಣಯ್ಯ ಎನ್ನ ಹೀನ ಬುದ್ಧಿಗಳನ್ನು ನೆನೆಯದೆ ಸ್ವಾನುಭವ ಗೋಷ್ಠಿಯಲಿ ಸೇರಿಸಿ ಮೀನಕೇತನ ಜನಕ ಪಾಲಿಸೊ , ಮಾನ ಅಭಿಮಾನಗಳು ನಿನ್ನದು ||೧|| ಎಷ್ಟು ನಿಲ್ಲಿಸಿದರು ಕೆಟ್ಟ ಇಂದ್ರಿಯಗಳು ತಟ್ಟನೆ ತಿರುಗುವವು ಭ್ರಷ್ಟನ ಚಿತ್ತ ಎಷ್ಟು ಹಿಡಿದರು ನಿಲ್ಲದು, ಕೃಷ್ಣಯ್ಯ ಎನ್ನ ಕಷ್ಟವನು ನೀ ಮನಕೆ ತಂದು ಎನಗಿಷ್ಟವೆಂತಹುದು ಅಂತೆಗೈವುತ ಭ್ರಷ್ಟತನವನು ತಿದ್ದಿ ನಿನ್ನುತ್ಕೃಷ್ಟ ಪದವನು ಸೇರಿಸೆನ್ನನು ||೨|| ವೈಕುಂಠನಗರೀಶ ಗೆದ್ದೆನೈ ಭವಪಾಶ ಸಕ್ಕರೆ ಸಿಕ್ಕಿತಯ್ಯ ನಿನ್ನಯ ನಾಮ ಜಿಹ್ವೆಗೆ ದೊರೆವುದೆ ಕೃಷ್ಣಯ್ಯ ಎನ್ನ ಅಕ್ಕರದಿಂದಲಿ ಪೊರೆದ ಮೇಲೆ ನಾನ್ ಟಕ್ಕು ಯಮನನು ಮಿಕ್ಕು ಮೀರುತ ಅಕ್ಕಜವ ಮಾಡಿ ಇಂದ್ರಭೋಗವ ಘಕ್ಕನೆ ನಿನ್ನ ದಾಸನಾದೆನು ||೩||
ದಾಸ ಸಾಹಿತ್ಯ ಪ್ರಕಾರ
ಬರೆದವರು