ಚಿತ್ತಜನಯ್ಯನ ಚಿಂತಿಸು ಮನವೇ

ಚಿತ್ತಜನಯ್ಯನ ಚಿಂತಿಸು ಮನವೇ

(ಕಾಂಬೋಧಿ ರಾಗ ಆದಿತಾಳ) ಚಿತ್ತಜನಯ್ಯನ ಚಿಂತಿಸು ಮನವೇ ಹೊತ್ತು ಕಳೆಯದೆ ಸರ್ವೋತ್ತಮನ ನೆನೆ ಮನವೆ ||ಪ|| ಕಾಲನ ದೂತರು ನೂಲು ಹಗ್ಗವ ತಂದು ಕಾಲು ಕೈಗಳ ಕಟ್ಟಿ ಮ್ಯಾಲೆ ಕುಟ್ಟಿ ಕಾಲಪಾಶದೊಳಿಟ್ಟು ಶೂಲದಿಂದಿರಿವಾಗ ಪಾಲಿಸುವರುಂಟೆ ಜಾಲವ ಮಾಡದೆ ||೧|| ದಂಡಧರನ ಭಟರು ಚಂಡಕೋಪದಿ ಬಂದು ಕೆಂಡದ ನದಿಯ ತಡೆಗೆ ಕೊಂಡೊಯ್ದು ಖಂಡಖಂಡವ ಕಿತ್ತು ಕೆಂಡದೊಳಿಡುವಾಗ ಹೆಂಡಿರು ಮಕ್ಕಳು ಬಂದು ಬಿಡಿಸಬಲ್ಲರೆ ಮರುಳೆ ||೨|| ಅಂಗಳಿಗೆ ದಬ್ಬಣಂಗಳ ಸೇರಿಸಿ ಎರಡು ಕಂಗಳಿಗೆ ಸೀಸವ ಕಾಸಿ ಪೊಯ್ಯಲು ತಂಗಿ ಅಕ್ಕ ಬಂದು ಭಂಗವ ಬಿಡಿಸುವರೆ ಅಂಗವು ಸ್ಥಿರವಲ್ಲ ರಂಗವಿಠಲ ಬಲ್ಲ ||೩||
ದಾಸ ಸಾಹಿತ್ಯ ಪ್ರಕಾರ
ಬರೆದವರು