ಜಾಲಿಯ ಮರದಂತೆ ಧರೆಯೊಳು ದುರ್ಜನರು

ಜಾಲಿಯ ಮರದಂತೆ ಧರೆಯೊಳು ದುರ್ಜನರು

ಜಾಲಿಯ ಮರದಂತೆ ಧರೆಯೊಳು ದುರ್ಜನರು ಜಾಲಿಯ ಮರದಂತೆ ಮೂಲಾಗ್ರ ಪರಿಯಂತ ಮುಳ್ಳು ಕೂಡಿಪ್ಪಂಥ || ಬಿಸಿಲಲಿ ಬಂದವರಿಗೆ ನೆರಳಿಲ್ಲ ಹಸಿದು ಬಂದವರಿಗೆ ಹಣ್ಣೂ ಇಲ್ಲ ಕುಸುಮ ವಾಸನೆಯಿಲ್ಲ ಕೂಡಲು ಸ್ಥಳವಿಲ್ಲ ರಸದಲ್ಲಿ ಸ್ವದವೂ ವಿಷದಂತೆ ಇರುತಿಹ || ಊರಹಂದಿಗೆ ಷಡ್ರಸಾನ್ನವಿಕ್ಕಲು ನಾರುವ ಗಂಧವ ಬಿಡುವುದುಂಟೆ ಘೋರ ಪಾಪಿಗೆ ತತ್ವಜ್ಞಾನ ಹೇಳಿದರೆ ಕ್ರೂರ ಕರ್ಮವ ಬಿಟ್ಟು ಸುಜನನಾಗುವನೆ || ತನ್ನಿಂದ ಉಪಕಾರ ತಟುಕಾದರೂ ಇಲ್ಲ ಬಿನ್ನಣ ಮಾತಿಗೆ ಕೊನೆಯಿಲ್ಲವೋ ಅನ್ನಕ್ಕೆ ಸೇರಿಹ ಕುನ್ನಿ ಮಾನವರಂತೆ ಇನ್ನಿವರ ಕಾರ್ಯವು ಪುರಂದರವಿಠಲ ||
ದಾಸ ಸಾಹಿತ್ಯ ಪ್ರಕಾರ
ಬರೆದವರು