ತರಳೆ ರನ್ನೆ ಕಪ್ಪು ಮೈಯವ ಯಾತರ ಚಲುವನೇ ?

ತರಳೆ ರನ್ನೆ ಕಪ್ಪು ಮೈಯವ ಯಾತರ ಚಲುವನೇ ?

ತರಳೆ ರನ್ನೆ ಕಪ್ಪು ಮೈಯವ ಯಾತರ ಚಲುವನೇ ? ಕರಿಯ ಜಟೆಯ ಜೋಗಿಗಿಂತ ಉತ್ತಮನಲ್ಲವೇನೆ ? ಜಲಧಿಯೊಳು ವಾಸವೇನೆ ಮನೆಗಳು ಇಲ್ಲವೆ ? ಲಲನೆ ಕೇಳು ಕಾಡಿಗಿಂತ ಲೇಸು ಅಲ್ಲವೇ ? ಮಂದರ ಗಿರಿಯ ಪೊತ್ತಿಹುದು ಏನು ಚಂದವೇ ? ಕಂದನ ಒಯ್ದು ಅಡವಿಯಲ್ಲಿಡುವುದು ಯಾವ ನ್ಯಾಯವೇ ? ಮಣ್ಣನು ಅಗೆದು ಬೇರನು ಮೆಲುವುದು ಏನು ಸ್ವಾದವೇ ? ತನ್ನ ಕೈಯಲ್ಲಿ ಕಪಾಲ ಪಿಡಿವುದು ಯಾವ ನ್ಯಾಯವೇ ? ಮುತ್ತಿನ ಹಾರ ಇರಲು ಕರುಳ ಮಾಲೆಯ ಧರಿಸುವರೇ ? ನಿತ್ಯ ರುಂಡ ಮಾಲೆಯ ಧರಿಸೋದು ಯಾವ ನ್ಯಾಯವೇ ? ಗಿಡ್ಡನಾಗಿ ಬೆಳೆದು ಅಳೆವುದು ಏನು ನ್ಯಾಯವೇ ? ಗುಡ್ಡದ ಮಗಳ ತಂದೆಗೆ ಮುನಿಯೋದು ಯಾವ ನ್ಯಾಯವೇ ? ಪಿತನ ಮಾತ ಕೇಳಿ ಮಾತೆಯ ಶಿರವನಳಿವರೇ ? ಕ್ಷಿತಿಕಂಠನಾಗಿ ಇರುವೋದು ಯಾವ ನ್ಯಾಯವೇ ? ಕೋಡಗ ಕರಡಿ ಕಪಿಗಳ ಹಿಂಡು ಬಂಧು ಬಳಗವೇ ? ಕೂಡಿ ಬಂದ ಭೂತ ಬಳಗ ಜ್ಞಾತಿ ಸಂಬಂಧವೇ ? ಹಾವಿನ ಹೆಡೆಯ ತುಳಿವರೇನೇ ಅಂಜಿಕಿಲ್ಲವೇ ? ಹಾವೇ ಮಯ್ಯಿಗೆ ಸುತ್ತಿ ಇರಲು ಹ್ಯಾಂಗೆ ಜೀವಿಪನೇ ? ಬತ್ತಲು ಇರುವನೇನು ಅವಗೆ ನಾಚಿಕಿಲ್ಲವೇ ? ಸತ್ತ ಗಜದ ಚರ್ಮ ಹೊದೆಯಲು ಹೇಸಿಕಿಲ್ಲವೇ ? ಉತ್ತಮ ತೇಜಿ ಇರಲು ಧರೆಯೊಳು ಹದ್ದನು ಏರ್ವರೇ ? ಎತ್ತಿನ ಬೆನ್ನು ಏರಿದವರು ಬುದ್ಧಿವಂತರೇ ? ಹರಿಹರರಿಗೆ ಸಾಮ್ಯವೇನೆ ಹೇಳೆ ರುಕ್ಮಿಣೀ ? ಪುರಂದರ ವಿಠಲ ಸರ್ವೋತ್ತಮ ಕೇಳೆ ಭವಾನಿ!
ದಾಸ ಸಾಹಿತ್ಯ ಪ್ರಕಾರ
ಬರೆದವರು