ದುರಿತಗಜ ಪಂಚಾನನ

ದುರಿತಗಜ ಪಂಚಾನನ

(ರಾಗ ನಾದನಾಮಕ್ರಿಯೆ ಆದಿತಾಳ) ದುರಿತಗಜ ಪಂಚಾನನ ನರ- ಹರಿಯೆ ದೇವರ ದೇವ ಕಾಯೊ ಗೋವಿಂದ ||ಪ|| ಹೆಸರುಳ್ಳ ನದಿಗಳನೊಳಗೊಂಬ ಸಮುದ್ರನು ಬಿಸುಡುವನೆ ಕಾಲುಹೊಳೆಗಳ ಗೋವಿಂದ ||೧|| ಒಂದು ಮೊಲಕೆ ಆರು ಹುಲಿ ಬಂದು ಕವಿದಿವೆ ಬಂಧನ ಬಿಡಿಸೆನ್ನ ತಂದೆ ಗೋವಿಂದ ||೨|| ಹೆತ್ತ ಮಕ್ಕಳು ಹುಚ್ಚರಾದರೆ ತಾಯ್ತಂದೆ ಎತ್ತದೆ ನೆಲಕೆ ಬಿಸುಡುವರೆ ಗೋವಿಂದ ||೩|| ಮುನ್ನ ಮಾಡಿದ ಕರ್ಮ ಬೆನ್ನ ಬಿಡದಿದ್ದರೆ ನಿನ್ನ ಓಲೈಸಲ್ಯಾಕೆ ಗೋವಿಂದ ||೪|| ಆಪತ್ತು ತಾಪತ್ರಯ ಬೆನ್ನ ಬಿಡದಿದ್ದರೆ ಶ್ರೀಪತಿ ಶರಣೆನ್ನಲ್ಯಾಕೆ ಗೋವಿಂದ ||೫|| ಅರಸು ಮುಟ್ಟಲು ದಾಸಿ ರಂಭೆಯಾದಳು ಗೋವಿಂದ ಪರುಷ ಮುಟ್ಟಲು ಲೋಹ ಸ್ವರ್ಣ ಗೋವಿಂದ ||೬|| ಮಾನಾಭಿಮಾನದೊಡೆಯ ರಂಗವಿಠಲ ಜ್ಞಾನಿಗಳರಸನೆ ಕಾಯೋ ಗೋವಿಂದ ||೭||
ದಾಸ ಸಾಹಿತ್ಯ ಪ್ರಕಾರ
ಬರೆದವರು