ಧನಲಂಪಟಗೆ ಎಲ್ಲಿಹುದು ಗುರುಕೃಪೆಯ ಜ್ಞಾನ

ಧನಲಂಪಟಗೆ ಎಲ್ಲಿಹುದು ಗುರುಕೃಪೆಯ ಜ್ಞಾನ

(ಸಾರಂಗ್ (ಮಾಲಕಂಸ್ ) ರಾಗ ಝಂಪೆತಾಳ) ಧನಲಂಪಟಗೆ ಎಲ್ಲಿಹುದು ಗುರುಕೃಪೆಯ ಜ್ಞಾನ ತನುಲಂಪಟಗೆ ಎಲ್ಲಿಹುದು ತನ್ನೊಳು ಖೂನ ||ಪ|| ವಿಷಯಲಂಪಟಗೆ ಎಲ್ಲಿಹುದು ತಾ ವಿರಕ್ತಿಯು ದೆಸೆಗೆಟ್ಟವಗೆ ಎಲ್ಲಿಹುದು ಯುಕ್ತಿಯು ಮುಸುಕಿದ ಮಾಯದವಗೆ ಲ್ಲಿಹುದು ಮುಕ್ತಿಯು ಹುಸಿಯಾಡುವವಗೆಲ್ಲಿಹುದು ಋಷಿಭಕ್ತಿಯು ||೧|| ಮರುಳಗುಂಟೆ ಅರಿವು ರಾಜಸನ್ಮಾನದ ತರಳಗುಂಟೆ ಭಯವು ಘಟಸರ್ಪದ ಎರಳೆಗುಂಟೆ ಖೂನ ಮೃಗಜಲವೆಂಬುವದ ಸೋರೆಗುಂಟೆ ಮಾತು ಚಾತುರ್ಯದ ||೨|| ಕನಸು ಕಾಂಬುವಗೆ ಎಲ್ಲಿಹುದು ತಾನಿಹ ಸ್ಥಾನ ಮನದಿಚ್ಛೆ ಇದ್ದವಗೆ ಎಲ್ಲಿಯ ಧ್ಯಾನ ದೀನಮಹಿಪತಿಸ್ವಾಮಿ ಕಾಣದವಗೆಲ್ಲಿ ಘನ ಅನುಭವಿಸಿಕೊಳದೆ ಜನ್ಮಕೆ ಬಂದಿದೇನ ||೩||
ದಾಸ ಸಾಹಿತ್ಯ ಪ್ರಕಾರ
ಬರೆದವರು