ನಿಮ್ಮಿಂದ ಗುರು ಪರಮಕಲ್ಯಾಣವು

ನಿಮ್ಮಿಂದ ಗುರು ಪರಮಕಲ್ಯಾಣವು

(ರಾಗ - ಬಹುಳಿ (ಶಂಕರಾ) ಝಪ್ ತಾಳ) ನಿಮ್ಮಿಂದ ಗುರು ಪರಮಕಲ್ಯಾಣವು ನಿಮ್ಮಿಂದಲೆನಗೆ ಘನ ಪರಿಪೂರ್ಣವು||ಪ|| ಹುರಿದು ಭವಬೀಜ ಧರೆಯೊಳು ದಯ ಕರುಣದಲಿ ಪರಮ ಆನಂದ ಸುಖ ಮಳೆಯಗರೆದು ಕರ್ಮಪಾಶಗಳೆಂಬ ಕರಿಕಿಬೇರನು ಕಿತ್ತಿ ಹರಗಿ ಬಿತ್ತಲು ನಾಮ ತಾರಕುಪದೇಶದಲಿ ||೧|| ವರ ಪ್ರತಾಪದ ಬೆಳೆಯು ತುಂಬಿ ತುಳುಕುವ ಸಿರಿಯು ಸರ್ವಮಯವೆಂಬ ತೆನೆಗಳು ತುಂಬಿ ಏರಿ ಸುಷುಮ್ನ ನಾಳದ ಮಂಚಿಕೆಯ ಮೆಟ್ಟಿ ಪರಿಪರಿ ಅವಸ್ಥೆ ಹಕ್ಕಿಗಳ ಹಾರಿಸಲಾಗಿ ||೨|| ಮುರಿದು ಭೇದಾಬೇದವೆಂಬ ಗೂಡಲೊಟ್ಟಿ ಅರಿವು ಕಣದಲ್ಲಿ ತರತರದಲಿಕ್ಕಿ ಜ್ಞಾನವೈರಾಗ್ಯವೆಂಬೆರಡು ಎತ್ತುಗಳ ಹೂಡಿ ಸರ್ವಗುಣ ತೆನೆ ತೆಗೆದು ತುಳಿದು ರಾಶಿ ಮಾಡಿಸಲಾಗಿ ||೩|| ಸರ್ವಮಯವೆಂಬ ರಾಶಿಯು ಒಬ್ಬುಳಿಯ ಮಾಡಿ ತೂರಿ ತರ್ಕ ಭಾಸಗಳೆದು ಮಿಥ್ಯಾ ಪ್ರಪಂಚವೆಂಬ ಕಾಳನು ಕಡೆಮಾಡಿ ಸಫಲ ಸಹಕಾರದಲಿ ಸುಗ್ಗಿ ಮಾಡಿಸಲಾಗಿ ||೪|| ಏಕೋಬ್ರಹ್ಮದ ಗತಿ ನಿಧಾನ ರಾಶಿಯು ದೋರಿ ಜನ್ಮ ಮರಣದ ಕೊಯಿಲಿಯ ಸುಟ್ಟು ಉರುಹಿ ಸದ್ಗತಿ ಮುಕ್ತಿ ಸುಕಾಲ ಸಾಧನವಿತ್ತು ಮೂಢಮಹಿಪತಿ ಪ್ರಾಣ ಸದ್ಗೈಸಲಾಗಿನ್ನು ||೫||
ದಾಸ ಸಾಹಿತ್ಯ ಪ್ರಕಾರ
ಬರೆದವರು