ಪಂಕಜ ಮುಖಿಯರೆಲ್ಲರು ಬಂದು

ಪಂಕಜ ಮುಖಿಯರೆಲ್ಲರು ಬಂದು

ಪಲ್ಲವಿ: ಪಂಕಜ ಮುಖಿಯರೆಲ್ಲರು ಬಂದು ಲಕ್ಷ್ಮೀ ವೇಂಕಟರಮಣಗಾರತಿ ಎತ್ತಿರೆ ಚರಣ: 1: ಮತ್ಸ್ಯಾವತಾರಗೆ ಮಂದರೋದ್ಧಾರಗೆ ಅಚ್ಚರಿಯಿಂದ ಭೂಮಿ ತಂದವಗೆ ಹೆಚ್ಚಾದ ಉಕ್ಕಿನ ಕಂಭದಿಂದಲಿ ಬಂದ ಲಕ್ಶ್ಮೀ ನರಸಿಂಹಗಾರತಿ ಎತ್ತಿರೆ 2: ವಾಮನ ರೂಪಲಿ ದಾನ ಬೇಡಿದವಗೆ ಪ್ರೇಮದಿ ಕೊಡಲಿಯ ಪಿಡಿದವಗೆ ರಾಮಚಂದ್ರನಾಗಿ ದಶ ಶಿರನನು ಕೊಂದ ಸ್ವಾಮಿ ಶ್ರೀ ಕೃಷ್ಣಗಾರತಿ ಎತ್ತಿರೆ 3: ಬತ್ತಲೆ ನಿಂತಗೆ ಬೌದ್ಧಾವತಾರಗೆ ಉತ್ತಮ ಅಶ್ವನೇರಿದಗೆ ಭಕ್ತರ ಸಲಹುವ ಪುರಂದರ ವಿಟ್ಠಲಗೆ ಮುತ್ತೈದೆಯರಾರತಿ ಎತ್ತಿರೆ
ದಾಸ ಸಾಹಿತ್ಯ ಪ್ರಕಾರ
ಬರೆದವರು