ಬೆಲ್ಲದ ಕಟ್ಟೆಯ ಕಟ್ಟಿ

ಬೆಲ್ಲದ ಕಟ್ಟೆಯ ಕಟ್ಟಿ

ಬೆಲ್ಲದ ಕಟ್ಟೆಯ ಕಟ್ಟಿ ಬೇವಿನ ಬೀಜವ ಬಿತ್ತಿ ಜೇನು ಮಳೆಗರೆದರೆ ವಿಷ ಹೋಗುವುದೇನಯ್ಯ ಏನು ನೋಡಿದರೇನು , ಏನು ಕೇಳಿದರೇನು ಮನದೊಳಗಿನ ತಾಮಸ ಮಾಣದನ್ನಕ ಕೊಳಲ ಧ್ವನಿಗೆ ಸರ್ಪ ತಲೆದೂಗುವಂದದಿ ಇದಕೇನು ಮದ್ದು ಶ್ರೀಪುರಂದರವಿಠಲ ||
ದಾಸ ಸಾಹಿತ್ಯ ಪ್ರಕಾರ
ಬರೆದವರು