ಭಂಡನಾದೆನು ನಾನು ಸಂಸಾರದಿ

ಭಂಡನಾದೆನು ನಾನು ಸಂಸಾರದಿ

(ರಾಗ ಮುಖಾರಿ ಝಂಪೆತಾಳ) ಭಂಡನಾದೆನು ನಾನು ಸಂಸಾರದಿ ಕಂಡು ಕಾಣದ ಹಾಗೆ ಇರಬಹುದೆ ನರಹರಿಯೆ ||ಪ|| ಕಂಡಕಲ್ಲುಗಳಿಗೆ ಕೈಮುಗಿದು ಸಾಕಾದೆ ದಿಂಡೆಕಾರರ ಮನೆಗೆ ಬಲು ತಿರುಗಿದೆ ಶುಂಡಾಲನಂತೆನ್ನ ಮತಿ ಮಂದವಾಯಿತೈ ಪುಂಡರೀಕಾಕ್ಷ ನೀ ಕರುಣಿಸೈ ಬೇಗ ||೧|| ನಾನಾ ವ್ರತಂಗಳನು ನಾ ಮಾಡಿ ಬಳಲಿದೆನು ಏನಾದರೂ ಎನಗೆ ಫಲವಿಲ್ಲವು ಆ ನಾಡು ಈ ನಾಡು ಸುತ್ತಿ ನಾ ಮರುಳಾದೆ ನೀನಾದರೂ ಕೃಪೆಯ ಇಡು ಬೇಗ ಹರಿಯೆ ||೨|| ಬುದ್ಧಿಹೀನರ ಮಾತು ಕೇಳಿ ನಾ ಮರುಳಾದೆ ಶುದ್ಧಿಯಿಲ್ಲದೆ ಮನವು ಕೆಟ್ಟು ಹೋಯ್ತು ಸಿದ್ಧನುತ ಸಿರಿಪುರಂದರವಿಠ್ಠಲ ತತ್ಪದ- ಸಿದ್ಧಿಯನು ದಯಗೈದು ಉಳುಹು ನೀ ಎನ್ನ ||೩||
ದಾಸ ಸಾಹಿತ್ಯ ಪ್ರಕಾರ
ಬರೆದವರು