ಮಂಗಳಂ ಜಯ ಮಂಗಳಂ

ಮಂಗಳಂ ಜಯ ಮಂಗಳಂ

ಮಂಗಳಂ ಜಯ ಮಂಗಳಂ ಜಯ ಮಂಗಳಂ ಜಯ ಮಂಗಳಂ ||ಪಲ್ಲವಿ|| ಚರಿಸುವ ಜಲದಲ್ಲಿ ಮತ್ಸ್ಯಾವತಾರಗೆ ಧರೆಯ ಬೆನ್ನಲಿ ಪೊತ್ತ ಕೂರ್ಮನಿಗೆ ಧರೆಯನುದ್ಧರಿಸಿದ ವರಾಹಾವತಾರಗೆ ತರಳನ್ನ ಕಾಯ್ದಂಥ ನರಸಿಂಹಗೆ ||೧|| ಭೂಮಿಯ ದಾನವ ಬೇಡಿದವಗೆ ಆ ಮಹಾಕ್ಷತ್ರಿಯರ ಗೆಲಿದವಗೆ ರಾಮಚಂದ್ರನೆಂಬ ಸ್ವಾಮಿಗೆ ಸತ್ಯ- ಭಾಮೆಯರಸ ಶ್ರೀಕೃಷ್ಣಗೆ ||೨|| ಬತ್ತಲೆ ನಿಂತ ಬೌದ್ಧಾವತಾರಗೆ ಉತ್ತಮಹಯವೇರಿದ ಕಲ್ಕಿಗೆ ಹತ್ತವತಾರದಿ ಭಕ್ತರ ಸಲಹಿದ ಮುದ್ದು ಪುರಂದರ ವಿಟ್ಠಲಗೆ ||೩||
ದಾಸ ಸಾಹಿತ್ಯ ಪ್ರಕಾರ
ಬರೆದವರು