ಮರೆತೆಯೇನೋ ರಂಗಾ ಮಂಗಳಾಂಗ

ಮರೆತೆಯೇನೋ ರಂಗಾ ಮಂಗಳಾಂಗ

(ಕಾಂಬೋಧಿ ರಾಗ ಝಂಪೆತಾಳ) ಮರೆತೆಯೇನೋ ರಂಗಾ ಮಂಗಳಾಂಗ ತುರುಕರ ಕಾಯ್ವಲ್ಲಿ ತೊಂಡನಾಗಿದ್ದೆನ್ನ ||ಪ|| ಕೋಲು ಕೈಯಲಿ ಕೊಳಲು ಜೋಲುಗಂಬಳಿ ಹೆಗಲ ಮ್ಯಾಲೆ ಕಲ್ಲಿ ಚೀಲ ಕೊಂಕಳಲ್ಲಿ ಕಾಲಗಡಗವನಿಟ್ಟು ಕಾಡೊಳಿಹ ಪಶುಹಿಂಡ ಲಾಲಿಸುವ ಬಾಲಕರ ಮ್ಯಾಳದೊಳಗಿದ್ದೆನ್ನ ||೧|| ಕಲ್ಲು ಮಣಿ ಕವಡೆಯನು ಕಾಡೊಳಿಹ ಗುಲಗಂಜಿ ಸಲ್ಲದೊಡವೆಯ ನೀನು ಸರ್ವಾಂಗಕೆ ಅಲ್ಲಲ್ಲೆಸೆಯೆ ಧರಿಸಿ ನವಿಲಗರಿಗಳ ಗೊಂಡೆ ಅಲ್ಲಿ ಗೊಲ್ಲರ ಕೂಡ ಚಲ್ಲಾಟ ಮಾಡುತಲಿ ||೨|| ಸಿರಿದೇವಿ ಬಂದು ಸೇರಿದ ಬಳಿಕ ಲೋಕದಲಿ ಸಿರಿ ಅರಸನೆಂದು ಸೇವಕರರಿವರೋ ಶರಣಾಗತರ ಪೊರೆವ ಶ್ರೀರಂಗವಿಠಲಯ್ಯ ನರಸಿಂಗ ನೀನಿರುವ ಪರಿಯು ಮುಂದಿನ ಸಿರಿಯು||೩||
ದಾಸ ಸಾಹಿತ್ಯ ಪ್ರಕಾರ
ಬರೆದವರು