ಮುಯ್ಯಕ್ಕೆ ಮುಯ್ಯಿ ತೀರಿತು

ಮುಯ್ಯಕ್ಕೆ ಮುಯ್ಯಿ ತೀರಿತು

(ರಾಗ ಪೂರ್ವಿ ಅಟತಾಳ ) ಮುಯ್ಯಕ್ಕೆ ಮುಯ್ಯಿ ತೀರಿತು , ಜಗ- ದಯ್ಯ ವಿಜಯ್ಯ ಸಾಹಯ್ಯ ಪಂಢರಿರಾಯ || ಸಣ್ಣವನೆಂದು ನಾ ನೀರು ತಾರೆಂದರೆ ಬೆಣ್ಣೆಕಳ್ಳ ಕೃಷ್ಣ ಮರವೆ ಮಾಡಿ ಚಿನ್ನದ ಗಿಂಡಿಲಿ ನೀರು ತಂದಿಟ್ಟರೆ ಕಣ್ಣು ಕಾಣದೆ ನಾ ಠೊಣೆದೆ ಪಂಢರಿರಾಯ || ಎನ್ನ ಪೆಸರು ಮಾಡಿ ಸೂಳೆಗೆ ಕಂಕಣ - ವನ್ನು ನೀನಿತ್ತೆ ನಿಜರೂಪದಿ ಎನ್ನ ಪೀಡಿಸಿ ಪರಮ ಬಂಡನ ಮಾಡಿ ನಿನ್ನ ಮುಯ್ಯಕ್ಕೆ ಮುಯ್ಯಿ ತೀರಿಸಿಕೊಂಡ್ಯಯ್ಯ || ಭಕ್ತವತ್ಸಲನೆಂಬ ಬಿರುದು ಬೇಕಾದರೆ ಭಕ್ತರಾಧೀನನಾಗಿರಬೇಡವೆ? ಯುಕ್ತಿಯಲಿ ನಿನ್ನಂಥ ದೇವರ ನಾ ಕಾಣೆ ಮುಕ್ತೀಶ ಪುರಂದರವಿಠಲ ಪಂಢರಿರಾಯ ||
ದಾಸ ಸಾಹಿತ್ಯ ಪ್ರಕಾರ
ಬರೆದವರು