ಯುಕ್ತಿಯಿಂದ ಭಕ್ತಿ ಮಾಡಲಿಕ್ಕೆ ಶಕ್ತನಲ್ಲ ನಾ

ಯುಕ್ತಿಯಿಂದ ಭಕ್ತಿ ಮಾಡಲಿಕ್ಕೆ ಶಕ್ತನಲ್ಲ ನಾ

(ಭೈರವಿ ರಾಗ ದಾದರಾ ತಾಳ) ಯುಕ್ತಿಯಿಂದ ಭಕ್ತಿ ಮಾಡಲಿಕ್ಕೆ ಶಕ್ತನಲ್ಲ ನಾ ಮುಕ್ತಿಯೋಗ್ಯ ಮಾಡೊ ಭಾವಭೋಕ್ತ ಕೃಪಾನಿಧೆ ||ಧ್ರುವ|| ಧ್ಯಾನ ಮೌನ ಸ್ನಾನ ಸಂಧ್ಯಾ ಖೂನ ಗುರುತು ಅರಿಯೆ ನಾ ನ್ಯೂನ ಪೂರ್ಣ ನೋಡದೆನ್ನ ರಕ್ಷಿಸೋ ದಯಾನಿಧೆ ||೧|| ಹೀನದೀನ ಜ್ಞಾನಶೂನ್ಯ ದಾನಧರ್ಮ ಅರಿಯೆ ನಾ ನೀನೆ ಕಾಯಬೇಕು ಎನ್ನ ಕರುಣದಿ ಕೃಪಾನಿಧೆ ||೨|| ದುರುಳ ದುರ್ವಾಸನೆಯ ದುರಾಚಾರಿ ದುರಾತ್ಮ ನಾ ತರಣೋಪಾಯ ತೋರಿಸೆನ್ನ ಹೊರೆಯೊ ದಯಾನಿಧೆ ||೩|| ಅರುಹುಕುರುಹುನರಿಯದಿಹ ಮರುಳ ಮಂಕ ತರಳ ನಾ ಕರವ ಪಿಡಿದು ಧರೆಯೊಳಿನ್ನು ತಾರಿಸೊ ದಯಾನಿಧೆ ||೪|| ಆಶಪಾಶದಲ್ಲಿ ವಾಸವಾದ ದೋಷರಾಶಿ ನಾ ಭಾಸಿ ಪಾಲಿಸು ಪುಣ್ಯ ಪ್ರಕಾಶಿಸೊ ದಯಾನಿಧೆ ||೫|| ಏಸು ಜನ್ಮ ಮೋಸಹೋಗಿ ಘಾಸಿಯಾದ ಜೀವ ನಾ ದಾಸರೊಡನೆ ಕೂಡಿಸೊ ಭಾಸ್ಕರ ದಯಾನಿಧೆ ||೬||
ದಾಸ ಸಾಹಿತ್ಯ ಪ್ರಕಾರ
ಬರೆದವರು