ವೆಂಕಟೇಶ ಬೇಡಿಕೊಂಬೆ

ವೆಂಕಟೇಶ ಬೇಡಿಕೊಂಬೆ

( ರಾಗ ಆರಭಿ ರೂಪಕ ತಾಳ) ವೆಂಕಟೇಶ ಬೇಡಿಕೊಂಬೆ ಕೃಪೆಯ ಪಾಲಿಸೋ ||ಪ|| ಬ್ರಹ್ಮಶಂಕರಾದಿ ವಂದ್ಯ ಎನಗೆ ಮುಕ್ತಿ ತೋರಿಸೊ ||ಅ|| ನಷ್ಟ ಮೊದಲಾದಂಥ ಕಷ್ಟ ಬಿಡಿಸೊ, ನಿನ್ನ ಪಟ್ಟದ ರಾಣಿಗೆ ಹೇಳಿ ಪದವಿ ಕೊಡಿಸೊ ಇಷ್ಟಭಕ್ತ ಜನರೊಳು ಎನ್ನ ಸೇರಿಸೊ ಈ ಸೃಷ್ಟಿಯೊಳು ನಿನ್ನ ದಾಸ ದಾಸನೆನಿಸೊ || ಉಟ್ಟು ಉಂಡು ಮಿಕ್ಕಿದ್ದೆಲ್ಲ ಎನಗೆ ಹಾಕಿಸೊ, ಪೊಂ- ಬಟ್ಟಲೊಳಗಿನ ಹಾಲು ಉಚ್ಚಿಷ್ಟ ಹಾಕಿಸೊ ಗಟ್ಯಾಗಿ ಸಕ್ಕರೆ ತುಪ್ಪ ರೊಟ್ಟಿ ಉಣ್ಣಿಸೊ, ಮುಂದೆ ಹುಟ್ಟಿ ಬಹು ಜನ್ಮಂಗಳ ಎನಗೆ ಬಿಡಿಸೊ || ಕಿಟ್ಟಗಟ್ಟಿದ ಕಬ್ಬಿಣಕ್ಕೆ ಪುಟವ ಹಾಕಿಸೊ ಉತ್ಕೃಷ್ಟ ಬಂಗಾರದೊಳು ಎನ್ನ ಸೇರಿಸೊ ಬೆಟ್ಟಿಗೆ ಉಂಗುರ ಮಾಡಿ ಎನ್ನ ಧರಿಸೊ, ಸ್ವಾಮಿ ದಿಟ್ಟ ಪುರಂದರವಿಠಲನೆ ದಯದಿ ಪಾಲಿಸೊ ||
ದಾಸ ಸಾಹಿತ್ಯ ಪ್ರಕಾರ
ಬರೆದವರು