ಹೇಳಿದರೆ ನಮ್ಮ ಮೇಲೆ ಯಾಕಮ್ಮ ಸಿಟ್ಟು

ಹೇಳಿದರೆ ನಮ್ಮ ಮೇಲೆ ಯಾಕಮ್ಮ ಸಿಟ್ಟು

೪-೬೭ ( ರಾಗ ಶಂಕರಾಭರಣ ಏಕ ತಾಳ) ಹೇಳಿದರೆ ನಮ್ಮ ಮೇಲೆ ಯಾಕಮ್ಮ ಸಿಟ್ಟು, ಇಂಥ ಗಾಳಿಗಾರ ಮಗನ ಪಡೆದ ಮೇಲೆ ನೀವಿಷ್ಟು ||ಪ|| ಸಣ್ಣ ರುಮಾಲು ಕಟ್ಟಿ ಚುಂಗ ಬಿಟ್ಟು , ಪಣೆಗೆ ಬಣ್ಣಿಸಿ ಕಸ್ತೂರಿ ತಿಲಕವನಿಟ್ಟು ಚಿಣ್ಣಿಕೋಲು ಚೆಂಡು ಬುಗುರಿ ಕೈಯಲಿಟ್ಟು, ಪೊಸ ಬೆಣ್ಣೆಯ ಮೆಲ್ಲು ಹೋಗೆಂದು ಕಳುಹಿಬಿಟ್ಟು || ಕರೆದು ಕೈಯಲ್ಲಿ ಚಿಟ್ಟೆಬೆಲ್ಲ ಕೊಟ್ಟು, ಚಿಕ್ಕ ಹರಳುಕಲ್ಲುಗಳನ್ನೆ ಅರಿಸಿ ಕೊಟ್ಟು ವಾರಿಗೆಯ ಪುಂಡರನ್ನು ಮಾಡಿಕೊಟ್ಟು, ಗೋಪಿ ಊರನೆಲ್ಲ ಸುಲಿಯೆಂದು ಕಳುಹಿಕೊಟ್ಟು || ಹೋಗೆಂದು ರಂಗನ ಕಳುಹಿಕೊಟ್ಟು, ಗೋಪಿ ಆಗ ಭೋಗಂಗಳೆಲ್ಲ ತುಂಬಿಕೊಟ್ಟು ನಿಗಮಗೋಚರನೆಂಬ ಪೆಸರನಿಟ್ಟು, ಗೋಪಿ ಪುರಂದರವಿಠಲನ್ನ ಬೆಳೆಸಿಬಿಟ್ಟು ||
ದಾಸ ಸಾಹಿತ್ಯ ಪ್ರಕಾರ
ಬರೆದವರು