ಪದ / ದೇವರನಾಮ

ದಾಸರ ಪದಗಳು

ಇದನಾದರು ಕೊಡದಿದ್ದರೆ ನಿನ್ನ ಪದಕಮಲವ ನಂಬಿ ಭಜಿಸುವದೆಂತೊ

(ಕೇದಾರಗೌಳ ರಾಗ ಆದಿತಾಳ) ಇದನಾದರು ಕೊಡದಿದ್ದರೆ ನಿನ್ನ ಪದಕಮಲವ ನಂಬಿ ಭಜಿಸುವದೆಂತೊ ||ಪ|| ಗ್ರಾಸವಾಸಗಳಿಗೆ ಇಲ್ಲವೆಂದು ನಿನ್ನ ಬೇಸರಿಸಿ ಬೇಡ ಬಂದುದಿಲ್ಲ ವಾಸುದೇವನೆ ನಿನ್ನ ದಾಸರ ದಾಸರ ದಾಸರ ದಾಸ್ಯವ ಕೊಡು ಸಾಕೆಂದರೆ ||೧|| ಸತಿಸುತರುಗಳ ಸಹಿತನಾಗಿ ನಾ ಹಿತದಿಂದ ಇರಬೇಕೆಂಬೊದಿಲ್ಲ ಇತರ ವಿಷಯಂಗಳಿಗೆರಗಿಸದೆ ಮನಕೆ ನಿನ್ನ ಕಥಾಮೃತವನೆ ಕೊಡು ಸಾಕೆಂದರೆ ||೨|| ಸಾಲವಾಯಿತು, ಸಂಬಳ ಎನಗೆ ಸಾಲದೆಂದು ಬೇಡ ಬಂದುದಿಲ್ಲ ನಾಲಗೆಯಲಿ ನಿನ್ನ ನಾಮದುಚ್ಚರಣೆಯ ಪಾಲಿಸಬೇಕೆಂದು ಬೇಡಿದೆನಲ್ಲದೆ ||೩|| ಒಡವೆ ಒಡ್ಯಾಣಗಳಿಲ್ಲೆಂದು ಬಡವನೆಂದು ಬೇಡಬಂದುದಿಲ್ಲ ಒಡೆಯ ನಿನ್ನಡಿಗಳಿಗೆರಗುವುದಕೆ ಮನ ಬಿಡದಿಹದೊಂದನು ಕೊಡು ಸಾಕೆಂದರೆ ||೪|| ಆಗಬೇಕು ರಾಜ್ಯಭೋಗಗಳೆನಗೆಂದು
ದಾಸ ಸಾಹಿತ್ಯ ಪ್ರಕಾರ
ಬರೆದವರು

ಇಟ್ಹಾಂಗೆ ಇರುವೆನೊ ಹರಿಯೇ ಎನ್ನ ದೊರೆಯೇ

(ಸಾವೇರಿ ರಾಗ ಆದಿತಾಳ) ಇಟ್ಹಾಂಗೆ ಇರುವೆನೊ ಹರಿಯೇ ಎನ್ನ ದೊರೆಯೇ ||ಪ|| ಸೃಷ್ಟಿವಂದಿತ ಪಾದಪದುಮ ಶ್ರೀಹರಿಯೇ ||ಅ.ಪ|| ಸಣ್ಣ ಶಾಲ್ಯೋದನ ಬೆಣ್ಣೆ ಕಾಸಿದ ತುಪ್ಪ ಚಿನ್ನದ ಹರಿವಾಣದಲಿ ಭೋಜನ ಘನ್ನಮಹಿಮ ನಿನ್ನ ಕರುಣ ತಪ್ಪಿದ ಮ್ಯಾಲೆ ಕ- ದನ್ನ ಕಾಣದೆ ಬಾಯ್ಬಿಡಿಸುವಿ ಹರಿಯೇ ||೧|| ಕೆಂಪಿಲಿ ಪೊಳೆವ ಪೀತಾಂಬರ ಉಡಿಸುವಿ ಸೊಂಪಿನಂಚಿನ ಶಾಲು ಹೊದಿಸುವಿಯೋ ಕಪಿಲಹರೇ ನಿನ್ನ ಕೃಪೆಯು ತಪ್ಪಿದ ಮ್ಯಾಲೆ ಕಪರ್ದಕ ಕೌಪೀನವು ದೊರೆಯದೊ ಹರಿಯೇ ||೨|| ಚಂದ್ರಶಾಲೆಲಿ ಚಂದ್ರಕಿರಣದಂತೊಪ್ಪುವ ಚಂದದ ಮಂಚದೊಳ್ ಮಲಗಿಸುವಿ ಮಂದರೋದ್ಧರ ನಿನ್ನ ಮಮತೆ ತಪ್ಪಲು ಧರ್ಮ- ಮಂದಿರದೊಳು ತೋಳ್ತಲಗಿಂಬು ಹರಿಯೇ ||೩|| ನರಯಾನದೊಳು ಕ್ಷಣ ನರವರನೆನಿಸುವಿ ವರಛತ್ರ ಚಾಮರ ಹಾಕಿಸುವಿ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಇಕ್ಕೋ ನೋಡೆ ರಂಗನಾಥನ ಚಿಕ್ಕಪಾದವ

( ಮಧ್ಯಮಾವತಿ ರಾಗ ಏಕತಾಳ) ಇಕ್ಕೋ ನೋಡೆ ರಂಗನಾಥನ ಚಿಕ್ಕಪಾದವ ||ಪ|| ಸಿಕ್ಕಿತೆ ಶ್ರೀ ಲಕ್ಷ್ಮೀಪತಿಯ ದಿವ್ಯಪಾದವ ||ಅ.ಪ|| ಶಂಖ ಚಕ್ರ ಗದಾ ಪದ್ಮ ಅಂಕಿತ ಪಾದವ ಅಂಕುಶ ಕುಲಿಶ ಧ್ವಜರೇಖಾ ಅಂಕಿತ ಪಾದವ ಪಂಕಜಾಸನನ ಹೃದಯದಲ್ಲಿ ನಲಿಯುವ ಪಾದವ ಸಂಕಟಹರಣ ವೆಂಕಟೇಶನ ದಿವ್ಯ ಪಾದವ ||೧|| ಲಲನೆ ಲಕ್ಷ್ಮಿಯಂಕದಲ್ಲಿ ನಲಿಯುವ ಪಾದವ ಜಲಜಾಸನನ ಅಭೀಷ್ಟವೆಲ್ಲ ಸಲಿಸುವ ಪಾದವ ಮಲ್ಲರ ಗೆಲಿದು ಕಂಸಾಸುರನ ಕೊಂದ ಪಾದವ ಬಲಿಯ ಮೆಟ್ಟಿ ಭಾಗೀರಥಿಯ ಪಡೆದ ಪಾದವ ||೨|| ಬಂಡೆಯ ಬಾಲೆಯ ಮಾಡಿದ ಉದ್ದಂಡ ಪಾದವ ಬಂಡಿಲಿದ್ದ ಶಕಟಾಸುರನ ಒದ್ದ ಪಾದವ ಅಂಡಜ ಹನುಮರ ಭುಜದೊಳೊಪ್ಪುವ ಪಾದವ ಕಂಡೆವೆ ಶ್ರೀರಂಗವಿಠಲನ ದಿವ್ಯಪಾದವ ||೩||
ದಾಸ ಸಾಹಿತ್ಯ ಪ್ರಕಾರ
ಬರೆದವರು

ಅಕಟಕಟ ಸಂಸಾರವನು ನೆಚ್ಚಿ ಕೆಡಬ್ಯಾಡ

(ಕಲ್ಯಾಣಿ ರಾಗ ಝಂಪೆತಾಳ)

ಅಕಟಕಟ ಸಂಸಾರವನು ನೆಚ್ಚಿ ಕೆಡಬ್ಯಾಡ ||ಪ||

ವಿಕಟದಲಿ ಮಾನವರು ಕೆಟ್ಟರೆಲ್ಲರು ನಿಜ ||ಅ.ಪ||

 

ಮುನ್ನ ನರಕಾಸುರನು ಬಡಿದು ಚಿಂತಾಮಣಿಯ

ತನ್ನ ಮನೆಯಲಿ ತಂದು ನಿಲ್ಲಿಸಿ ನೃಪರ

ಕನ್ನೆಯರ ಷೋಡಶಸಹಸ್ರವನೆ ತಂದಾತ

ಹೆಣ್ಣನೊಬ್ಬಳನೊಯ್ದುದಿಲ್ಲವೊ ನೋಡೊ ||೧||

 

ಸಾವಿರ ಕರ ಪಡೆದ ಕಾರ್ತವೀರ್ಯಾರ್ಜುನನು

ಭೂವಲಯದೊಳಗೇ ವೀರನೆನಿಸಿ

ರಾವಣನ ಸೆರೆಯಿಟ್ಟು ಕಾಮಧೇನುವ ಬಯಸಿ

ಸಾವಾಗ ಏನು ಕೊಂಡೊಯ್ದನೋ ನೋಡೊ ||೨||

 

ಕೌರವನು ಧರೆಯೆಲ್ಲ ತನಗಾಗಬೇಕೆಂದು

ವೀರಪಾಂಡವರೊಡನೆ ಕದನಮಾಡಿ

ಮಾರಿಯ ವಶವೈದಿ ಹೋಹಾಗ ತನ್ನೊಡನೆ

ದಾಸ ಸಾಹಿತ್ಯ ಪ್ರಕಾರ
ಬರೆದವರು

ಮಂಗಳ ಮಂಗಳ ಜಯಮಂಗಳ

(ಭೈರವಿ ರಾಗ ತೀನ್ ತಾಳ) ಮಂಗಳ ಮಂಗಳ ಜಯಮಂಗಳಾ , ಶುಭ- ಮಂಗಳ ಸ್ವಾಮಿ ಸರ್ವೋತ್ತಮಗೆ ಸಹಸ್ರ ಮಂಗಳ ದೇವೋತ್ತಮಗೆ ||ಪ|| ಕೇಶವ ನಾರಾಯಣಗೆ ಮಂಗಳ ವಾಸುದೇವ ಸುತ ಶ್ರೀಕೃಷ್ಣಗೆ ಮಂಗಳ ಹೃಷಿಕೇಶ ಪುರುಷೋತ್ತಮಗೆ ಮಂಗಳ ವಸುದೇವಸುತ ಶ್ರೀಕೃಷ್ಣಗೆ ಮಂಗಳ ||೧|| ಅಚ್ಯುತ ಜನಾರ್ದನಗೆ ಮಂಗಳ ಮತ್ಸ್ಯಕೂರ್ಮವರಾಹಗೆ ಮಂಗಳ ಸಚ್ಚಿದಾನಂದ ಶ್ರೀಧರಗೆ ಮಂಗಳ ಮುಚಕುಂದ ವರದ ವಿಷ್ಣುಗೆ ಮಂಗಳ ||೨|| ಮಾಧವ ಮಧುಸೂಧನಗೆ ಮಂಗಳ ಸಾಧು ಹೃದಯವಾಸಗೆ ಮಂಗಳ ಅಧೋಕ್ಷಜ ಅನಿರುದ್ಧಗೆ ಮಂಗಳ ಪದ್ಮನಾಭ ಪ್ರದ್ಯುಮ್ನಗೆ ಮಂಗಳ ||೩|| ಗರುಡವಾಹನ ಗೋವಿಂದಗೆ ಮಂಗಳ ಉರಗಶಯನ ಉಪೇಂದ್ರಗೆ ಮಂಗಳ ಹರಿ ದಾಮೋದರ ಸಮ್ಕರುಷಣಗೆ ಮಂಗಳ ನಾರಸಿಂಹ ತ್ರಿವಿಕ್ರಮಗೆ ಮಂಗಳ ||೪|| ಪರಮಪಾವನ ಭಾರ್ಗವಗೆ ಮಂಗಳ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಜಯ ಜಯ ಕರುಣಾಕರ ಕೃಪಾಲ

(ಯಮನ್ ರಾಗ ತೀನ್ ತಾಲ್) ಜಯ ಜಯ ಕರುಣಾಕರ ಕೃಪಾಲ ಜಯ ಜಯ ಗುರುಮುನಿಜನ ಪ್ರತಿಪಾಲ ||ಧ್ರುವ|| ರಾಜತೇಜೋನಿಧಿ ರಾಜರಾಜೇಂದ್ರ ರಾಜಿಸುತಿಹ ಮಕುಟಮಣಿ ಸುರೇಂದ್ರ ಸುಜನಹೃದಯ ಸದ್ಗುಣಮಣಿ ಸಾಂದ್ರ ಅಜಸುತ ಸೇವಿತ ಸುಜ್ಞಾನ ಸುಮೋದ ||೧|| ಅಗಣಿತಗುಣ ಅಗಾಧ ಅಪಾರ ನಿಗಮಗೋಚರ ನಿರುಪಮ ನಿರ್ಧಾರ ಸಗುಣ ನಿರ್ಗುಣನಹುದೋ ಸಾಕ್ಷಾತ್ಕಾರ ಭಕ್ತವತ್ಸಲ ಮುನಿಜನ ಮಂದಾರ ||೨|| ಧೀರ ಉದಾರ ದಯಾನಿಧಿಪೂರ್ಣ ತಾರಕಸ್ವಾಮಿ ಸದ್ಗುರು ನಿಧಾನ ತರಳ ಮಹಿಪತಿ ಜನೋದ್ಧರಣ ಚರಣಸ್ಮರಣಿ ನಿಮ್ಮ ಸಕಲಾಭರಣ ||೩||
ದಾಸ ಸಾಹಿತ್ಯ ಪ್ರಕಾರ
ಬರೆದವರು

ತಾನಾ ತಂದನಾನಾ ತಾನಾ ತಂದನಾನಾ

( ಜಾನಪದ ಧಾಟಿ ) ತಾನಾ ತಂದನಾನಾ ತಾನಾ ತಂದನಾನಾ ತಾನಾ ತಂದನಾನಾ ತಾನಾ ತಂದನಾನಾ ||ಧ್ರುವ || ಬಲ್ಲೆಬಲ್ಲೆನೆಂಬರು ಬಲ್ಲರಿಯದಿಹರು ಬಲ್ಲರೆ ನೀವಿನ್ನು ಹೇಳುವದು ತಾನಾ ||೧|| ಕಣ್ಣು ಕಾಂಬುವದೇನು ಕಣ್ಣಿನೊಳಿಹುದೇನು ಕಣ್ಣು ಕಾಂಬುವ ಗತಿ ತಿಳಿಯುವದು ತಾನಾ ||೨|| ಕಿವಿಯು ಕಿವಿಯೆಂಬುವದೇನು ಕಿವಿಯು ಕೇಳುವದೇನು ಕಿವಿಯು ಕೇಳುವ ಗತಿ ತಿಳಿಯುವದು ತಾನಾ ||೩|| ಮೂಗು ಮೂಗೆಂಬುದೇನು ಮೂಗಿನೊಳಾಡುವದೇನು ಆಡುವ ಗತಿಗಳ ತಿಳಿಯುವದು ತಾನಾ ||೪|| ಬಾಯಿ ಬಾಯೆಂಬುದೇನು ಬಾಯಿಯೊಳ ನುಡಿವದೇನು ಬಾಯಿ ನುಡಿವ ಗತಿ ತಿಳಿಯುವದು ತಾನಾ ||೫|| ದೇಹ ದೇಹೆಂಬುದೇನು ದೇಹದೊಳಿಹುದೇನು ದೇಹದೊಳಿಹ ವಸ್ತು ತಿಳಿಯುವದು ತಾನಾ ||೬|| ಪ್ರಾಣವೆಂಬುದೇನು ಕರಣವೆಂಬುದೇನು
ದಾಸ ಸಾಹಿತ್ಯ ಪ್ರಕಾರ
ಬರೆದವರು

ಜಯದೇವ ಜಯದೇವ ಜಯಗುರು ಮೈಲಾರಿ

( ಮಾಲಕಂಸ್ ರಾಗ ಝಪ್ ತಾಳ) ಜಯದೇವ ಜಯದೇವ ಜಯಗುರು ಮೈಲಾರಿ ಮನಮೈಲ ಮರ್ದಿಸಿದಯ್ಯ ನೀನೆ ಅಸುರಾರಿ ||ಧ್ರುವ|| ಖಡ್ಗವ ಕರದಲಿ ಪಿಡಿದು ಖಂಡಿಸಿದಜ್ಞಾನ ಖಂಡೇರಾಯೆನಿಸಿಕೊಂಡು ಪ್ರಕಟಿಸಿದನುದಿನ ಹಿಂಡದೈವಕೆ ಪ್ರಚಂಡನಹುದೊ ಪರಿಪೂರ್ಣ ಮಂಡಲದೊಳು ನಿಮ್ಮ ಕೊಂಡಾಡುದು ತಾ ಸುರಜನ ||೧|| ಮಲಹರಣ ಮಾಡಲು ಧರಿಸಿ ಅವತಾರ ಮೂಲೋಕ ಪಾವನ ಮಾಡುವ ಸಹಕಾರ ಸಲಹುವೆ ಭಕ್ತ ಜನರಿಗೆ ನೀ ಘನ ಮಂದಾರ ಮಲೆತಿಹ ದೈತ್ಯರ ಸಂಹರಿಸುವೆ ನೀ ಅತಿ ಶೂರ ||೨|| ಮಹಿಗೆ ಪತಿ ಅಹುದು ಶ್ರೀಗುರು ಭೂಪತಿ ಬಾಹ್ಯಾಂತ್ರ ಬೆಳಗುವೆ ಶ್ರೀಪಾದಕೆ ಆರ್ತಿ ಇಹಪರಕೆ ದಾತನಹುದೋ ಶ್ರೀಪತಿ ಜಯಜಯವೆಂದು ಬೆಳಗುವೆ ದಾಸ ಮಹಿಪತಿ ||೩||
ದಾಸ ಸಾಹಿತ್ಯ ಪ್ರಕಾರ
ಬರೆದವರು

ಇನ್ನೇನಿನ್ನೇನು ಎನಗಿನ್ನು ಇನ್ನೇನಿನ್ನೇನು

(ಪೂರ್ವಿ ರಾಗ ದೀಪಚಂದಿ ತಾಳ) ಇನ್ನೇನಿನ್ನೇನು ಎನಗಿನ್ನು ಇನ್ನೇನಿನ್ನೇನು ||ಧ್ರುವ|| ಎನ್ನೊಳು ಗುರು ತನ್ನ ಮರ್ಮವ ತೋರಿದ ಇನ್ನೇನಿನ್ನೇನು ||೧|| ಮುನ್ನಿನ ಕರ್ಮವು ನಿರ್ಮೂಲವಾಯಿತು ಇನ್ನೇನಿನ್ನೇನು ||೨|| ಎನ್ನೊಳು ಘನ ಬ್ರಹ್ಮವಸ್ತು ತಾನಾಯಿತು ಇನ್ನೇನಿನ್ನೇನು ||೩|| ನಾನು ನಾನೆಂಬುದು ನೆಲೆಯು ತಾ ತಿಳಿಯಿತು ಇನ್ನೇನಿನ್ನೇನು||೪|| ಏನೆಂದು ತಿಳಿಯದ ಅನುಮಾನಗಳೆಯಿತು ಇನ್ನೇನಿನ್ನೇನು ||೫|| ಪರಮತತ್ವದ ಗತಿ ನೆಲೆನಿಭ ತೋರಿತು ಇನ್ನೇನಿನ್ನೇನು ||೬|| ಎನ್ನೊಳಾತ್ಮ ಖೂನ ಕುರುಹುವು ತಿಳಿಯಿತು ಇನ್ನೇನಿನ್ನೇನು ||೭|| ಕನಸುಮನಸು ಎಲ್ಲ ನಿನ್ನ ಸೇವ್ಯಾಯಿತು ಇನ್ನೇನಿನ್ನೇನು ||೮| ಹಗಲಿರುಳೆಂಬುದು ಹಗರಣವಾಯಿತು ಇನ್ನೇನಿನ್ನೇನು ||೯||
ದಾಸ ಸಾಹಿತ್ಯ ಪ್ರಕಾರ
ಬರೆದವರು

ಇಂದು ಎನ್ನ ಜನುಮ ಸಾಫಲ್ಯವಾಯಿತು

(ಭೈರವಿ ರಾಗ ದಾದರಾ ತಾಳ) ಇಂದು ಎನ್ನ ಜನುಮ ಸಾಫಲ್ಯವಾಯಿತು ಬಂದು ಎನ್ನ ಮೊದಲೆ ಪುಣ್ಯ ಕೈಗೂಡಿತು ||ಧ್ರುವ|| ಭಾನುಕೋಟಿ ತೇಜವಾಗಿ ರೂಪುದೋರಿತು ತಾನೆ ತನ್ನಿಂದೊಲಿದು ದಯವ ಬೀರಿತು ಜ್ಞಾನ ಭಕುತಿ ವೈರಾಗ್ಯವನ್ನು ಅರುಹಿತು ನಾನು ನೀನು ಎಂಬುವ ಅಹಂಭಾವ ಹರಿಯಿತು ||೧|| ಎಂದು ಇಂದಿರೇಶನ ಕಾಣದ ಕಣ್ಣುದೆರೆಯಿತು ಬಂದು ಬೀಳುವ ಭವಪಾಶದ ಬಲಿಯು ಹರಿಯಿತು ಚಂದವಾಗಿ ಸದ್ಗುರು ಕರುಣ ಮಳೆಯಗರೆಯಿತು ಹೊಂದಿ ಹರುಷಪಡುವಾನಂದ ಪಥವುದೋರಿತು ||೨|| ಭಿನ್ನವಿಲ್ಲದೆ ಸಹಸ್ರದಳದಲ್ಯಾಡುವ ಹಂಸನ ಕಣ್ಣು ಕಂಡು ಪಾವನವಾಯಿತು ವಾಸುದೇವನ ಎನ್ನ ಮನಸಿನಂತಾಯಿತು ಪುಣ್ಯ ಜೀವನ ಧನ್ಯಗೈಸಿತು ಮಹಿಪತಿ ಪ್ರಾಣಜೀವನ ||೩||
ದಾಸ ಸಾಹಿತ್ಯ ಪ್ರಕಾರ
ಬರೆದವರು