ಪದ / ದೇವರನಾಮ

ದಾಸರ ಪದಗಳು

ಇದೇ ನಮ್ಮ ವೃತ್ತಿ ಸದ್ಗುರು ಭಾವಭಕ್ತಿ

( ಪಹಾಡಿ ರಾಗ ಕೇರವಾ ತಾಳ) ಇದೇ ನಮ್ಮ ವೃತ್ತಿ ಸದ್ಗುರು ಭಾವಭಕ್ತಿ ||ಧ್ರುವ|| ಇದೇ ನಮ್ಮ ಮನೆಯು ಸದ್ಗುರು ಸ್ಮರಣೆಯು ಇದೇ ನಮ್ಮ ವರ್ತನೆಯು ಸದ್ಗುರು ಪ್ರಾರ್ಥನೆಯು ||೧|| ಇದೇ ನಮ್ಮ ಗ್ರಾಮ ಸದ್ಗುರು ದಿವ್ಯನಾಮ ಇದೇ ನಮ್ಮ ಸ್ತೋಮ ಸದ್ಗುರು ಆತ್ಮಾರಾಮ ||೨|| ಇದೇ ನಮ್ಮ ಭೂಮಿ ಸದ್ಗುರು ಘನಸ್ವಾಮಿ ಇದೇ ನಮ್ಮ ಸೀಮಿ ಸದ್ಗುರು ಅಂತರ್ಯಾಮಿ ||೩|| ಇದೇ ನಮ್ಮ ದೇಶ ಸದ್ಗುರು ಉಪದೇಶ ಇದೇ ನಮ್ಮಭ್ಯಾಸ ಸದ್ಗುರು ಜಗದೀಶ ||೪|| ಇದೇ ನಮ್ಮ ವಾಸ ಸದ್ಗುರು ಸಮರಸ ಇದೇ ನಮ್ಮ ಗ್ರಾಸ ಸದ್ಗುರು ಪ್ರೇಮರಸ ||೫|| ಇದೇ ನಮ್ಮ ವ್ಯಸನ ಸದ್ಗುರು ನಿಜಧ್ಯಾಸ ಇದೇ ನಮ್ಮ ಆಶೆ ಸದ್ಗುರು ಸುಪ್ರಕಾಶ ||೬|| ಇದೇ ನಮ್ಮಾಶ್ರಮ ಸದ್ಗುರು ನಿಜೋತ್ತಮ ಇದೇ ನಮ್ಮುದ್ಯಮ ಸದ್ಗುರು ಸಮಾಗಮ ||೭||
ದಾಸ ಸಾಹಿತ್ಯ ಪ್ರಕಾರ
ಬರೆದವರು

ಇಂದಿನಿರುಳಿನ ಕನಸಿನಲ್ಲಿ ಬಂದು

(ರಾಗ ಶುದ್ಧಸಾವೇರಿ ಅಟ್ಟತಾಳ) ಇಂದಿನಿರುಳಿನ ಕನಸಿನಲ್ಲಿ ಬಂದು ಮುಂದೆ ನಿಂದುದ ಕಂಡೆನೆ ಗೋವಳನ ||ಪ|| ಆಣಿಮುತ್ತಿನ ವೆಂಡೆಯದ ಕಾಲಂದುಗೆ ಗೆಜ್ಜೆ ಜಾಣನಂಗಜನ ಪಿತನ ಕೈಯ ವೇಣು ಮಾಣಿಕ್ಯದ ಕಂಕಣ ಹೊನ್ನುಡಿ ಘಂಟೆ ವಾಣಿಯ ರಚನೆ ಎಲ್ಲಿ[ಯು] ಈ ಗೋವಳನಾ ||೧|| ಮೊಲ್ಲೆ ಮಲ್ಲಿಗೆ ಚೊಲ್ಲೆಯದ ಚಲ್ಲಣದ ಶಿರ- ದಲ್ಲಿ ಗುಂಜಿಯ ದಂಡೆಯ ಚೆಲ್ವ ಕಂಗಳ ಗೋಪಿಯರ ಮೇಲೆ ಕಡೆಗಣ್ಣ ಚೆಲ್ಲುತೊಯ್ಯನೆ ನಡೆದ ಗೋವಳನ ||೨|| ತಿತ್ತಿ ಮೌರಿ ಕೊಂಬು ಸುತ್ತಿದ ಕತ್ತ ತಾವಿಲಿ ತುತ್ತುರೂ ತೂರು ತೂರೆನುತ ಚಿತ್ತವ ಮರುಳು ಮಾಡಿದನೆ ಪೊಂಗೊಳಲೂದಿ ಮೊತ್ತದ ಗೋಪಿಯರನೆಲ್ಲ ಗೋವಳನ ||೩|| ಎಸಳುಕಂಗಳ ಢಾಳ ಶಶಿ ನೊಸಲ ತಿಲಕ ಎಸೆವ ಬಿಂಬಾಧರದ ಪೊಸ ಮುತ್ತಿನೋಲೆ ಮೂಕುತಿ ಹೊನ್ನುಡಿ ಘಂಟೆ ಎಸೆವ ನೂಪುರ ಹಾಹೆಯ(?) ಗೋವಳನ ||೪||
ದಾಸ ಸಾಹಿತ್ಯ ಪ್ರಕಾರ
ಬರೆದವರು

ಇನ್ನಿವನು ಈಗ ಬರಲಿದಕೆ ಬಗೆಯೇನು

(ರಾಗ ಮುಖಾರಿ ಝಂಪೆತಾಳ) ಇನ್ನಿವನು ಈಗ ಬರಲಿದಕೆ ಬಗೆಯೇನು ಚೆನ್ನಾಗಿ ಪೇಳೆ ರಮಣಿ ||ಪ|| ಮನ್ನಿಸಿ ಮಮತೆಯಲಿ ಮನವ ಸೆಳೆಕೊಂಡೊಯ್ದ ಅನ್ಯರನು ಕೂಡುವನೆ ಕೆಳದಿ ಕೆಳದಿ ||ಅ.ಪ|| ಬಣ್ಣದ ಗಿಣಿ ಬರೆದ ಸಣ್ಣ ಕುಪ್ಪಸವುಳ್ಳ ಚಿನ್ನದ ಶ್ರೀರೇಖೆ ಸೀರೆ ಬಿನ್ನಣವುಳ್ಳ ಬಿಳಿಯೆಲೆ ಅಡಿಕೆ ಕೆನೆಸುಣ್ಣ ಕರ್ಪೂರ ಕಾಚಿನುಂಡೆ ಕಣ್ಣಿಗಿಂಪಾದ ಕಡುಚೆಲ್ವ ಮಲ್ಲಿಗೆ ಮೊಗ್ಗೆ ಉನ್ನತವಾದ ದಂಡೆ ಇನ್ನು ಈ ಪರಿಮಳವು ಬಗೆಬಗೆಯ ಆಭರಣ ರನ್ನ ಕೆತ್ತಿಸಿದ ಗೋಡೆ ಮುನ್ನ ಸಿಂಗರ ಮಾಡಿ ಎದೆ ಹಿಡಿದು ಬಿಗಿಯಪ್ಪಿ ನಿನ್ನೆ ಈ ವೇಳೆ ಕೂಡಿದ ದೃಢದೆ ||೧|| ಈಗಾಗ ಬಾಹನೆಂತಿರುವೆ ತಾನೂರಿದ್ದ ಉಗುರು ಗುರುತನು ನೋಡುತ ಸೋಗೆಗಣ್ಣಿನ ಕಾಡಿಗೆಯ ಕಲಕಿದನೆಂದು ಬೇಗ ನಟನೆಯ ಮಾಡುತ ರಾಗದಿಂದಲಿ ರವಿಕೆನೆರಿಯನು ಬದಲುಟ್ಟು
ದಾಸ ಸಾಹಿತ್ಯ ಪ್ರಕಾರ
ಬರೆದವರು

ವಾಸುದೇವ ನಿನ್ನ ಮರ್ಮಕರ್ಮಂಗಳ

(ಮುಖಾರಿ ರಾಗ ಅಟತಾಳ) ವಾಸುದೇವ ನಿನ್ನ ಮರ್ಮಕರ್ಮಂಗಳ ದೇಶದೇಶದಲ್ಲಿ ಪ್ರಕಟಿಸಲೊ ||ಪ|| ಬೇಸರದೆ ಎನ್ನ ಹೃದಯಕಮಲದಲ್ಲಿ ವಾಸವಾಗಿ ಸುಮ್ಮನಿದ್ದೀಯೊ ||ಅ.ಪ|| ತರಳತನದಲಿದ್ದು ದುರುಳನಾಗಿ ಬಂದು ಒರಳಿಗೆ ಕಟ್ಟಿಸಿಕೊಂಡುದನು ತುರುವ ಕಾಯಲಿ ಪೋಗಿ ಕಲ್ಲಿಯೋಗರವನು ಗೊಲ್ಲರ ಕೂಡೆ ನೀ ಉಂಡುದನು ನೆರೆಮನೆ ಹೊರಮನೆಗಳ ಪೊಕ್ಕು ಬೆಣ್ಣೆಯ ಅರಿಯದಂತೆ ಕದ್ದು ಮೆದ್ದುದನು ಕೆರಳಿಸಿದೆಯಾದರೆ ಒದರುವೆ ಎಲೊ ನರ- ಹರಿ ಎನ್ನ ಬಾಯಿಗೆ ಬಂದುದನು ||೧|| ಕಟ್ಟಿ ಕರೆವ ಏಳುದಿನದ ಮಳೆಗೆ ವೋಗಿ ಬೆಟ್ಟವ ಪೊತ್ತದ್ದು ಹೇಳಲೊ ಅಟ್ಟಿಸಿಕೊಳ್ಳುತ ಯಾಗಶಾಲೆಗೆ ಪೋಗಿ ಹೊಟ್ಟೆಯ ಹೊರೆದದ್ದು ಹೇಳಲೊ ದುಷ್ಟ ಹಾವಿನ ಹೆಡೆಯನು ತುಳಿದಾಡಿದ ದುಷ್ಟತನವನು ಹೇಳಲೊ ನೆಟ್ಟುನೆ ಅಂಬರಕೆತ್ತಿದನ ಹೊಯ್ದು
ದಾಸ ಸಾಹಿತ್ಯ ಪ್ರಕಾರ
ಬರೆದವರು

ತಾ ತಾ ತಾ ತಾ ತಾ ರಂಗ ನಿನ್ನ ಪಾದ

(ತೋಡಿ ರಾಗ , ಆದಿತಾಳ) ತಾ ತಾ ತಾ ತಾ ತಾ ರಂಗ ನಿನ್ನ ಪಾದ ಧೈ ಧೈ ಧೈ ಧೈ ಧೈ ಎಂದು ಕುಣಿಯುತ ||ಪ|| ನಿಗಮವ ತಂದು ನಗವ ಬೆನ್ನಲಿ ಹೊತ್ತು ಅಗೆದು ಬೇರು ತಿಂದು ಬಾಲನ ಸಲಹಿದೆ ಅಂದು ||೧|| ಪೊಡವಿ ಈರಡಿ ಮಾಡಿ ಕೊಡಲಿ ಪಿಡಿದು ಮುನಿ ಮಡದಿಯ ಸಲಹಿದೆ ಎನ್ನೊಡೆಯ ಶ್ರೀಕೃಷ್ಣ ||೨|| ಅಂಗನೆಯ ವ್ರತಭಂಗವ ಮಾಡಿ(ದೆ) ತುಂಗ ಕುದುರೆಯೇರಿದ ರಂಗವಿಠಲನೆ ||೩||
ದಾಸ ಸಾಹಿತ್ಯ ಪ್ರಕಾರ
ಬರೆದವರು

ನಾ ನಿನಗೇನೂ ಬೇಡುವದಿಲ್ಲ

(ವಸಂತ ರಾಗ ತ್ರಿಪುಟತಾಳ) ನಾ ನಿನಗೇನೂ ಬೇಡುವದಿಲ್ಲ, ಎನ್ನ ಹೃದಯಕಮಲದೊಳು ನಿಂದಿರೊ ಹರಿಯೆ ||ಪ|| ಶಿರ ನಿನ್ನ ಚರಣದಲ್ಲೆರಗಲಿ, ಎನ್ನ ಚಕ್ಷುಗಳು ನಿನ್ನ ನೋಡಲಿ ಹರಿಯೆ ಕರ್ಣ ಗೀತಂಗಳ ಕೇಳಲಿ , ಎನ್ನ ನಾಸಿಕ ನಿರ್ಮಾಲ್ಯ ಘ್ರಾಣಿಸಲಿ ಹರಿಯೆ ||೧|| ನಾಲಿಗೆ ನಿನ್ನ ಕೊಂಡಾಡಲಿ, ಎನ್ನ ಕರಗಳೆರಡು ನಿನಗೆ ಮುಗಿಯಲಿ ಹರಿಯೆ ಪಾದ ತೀರ್ಥಯಾತ್ರೆ ಹೋಗಲಿ, ನಿನ್ನ ಧ್ಯಾನ ಎನಗೊಂದು ಕೊಡು ಕಂಡ್ಯ ಹರಿಯೆ ||೨|| ಬುದ್ಧಿ ನಿನ್ನೊಳು ಕುಣಿದಾಡಲಿ, ಎನ್ನ ಚಿತ್ತ ನಿನ್ನಲಿ ನಲಿದಾಡಲಿ ಹರಿಯೆ ಭಕ್ತಜನರ ಸಂಗವು ದೊರಕಲಿ , ರಂಗ - ವಿಠಲ ನಿನ್ನ ದಯವಾಗಲಿ ಹರಿಯೆ ||೩||
ದಾಸ ಸಾಹಿತ್ಯ ಪ್ರಕಾರ
ಬರೆದವರು

ಹರೇ ವೆಂಕಟಶೈಲ ವಲ್ಲಭ

(ನಾದನಾಮಕ್ರಿಯೆ ರಾಗ ಏಕತಾಳ) ಹರೇ ವೆಂಕಟಶೈಲ ವಲ್ಲಭ ಪೊರೆಯಬೇಕು ಎನ್ನ ||ಪ|| ದುರಿತದೂರ ನೀನಲ್ಲದೆ ಧರೆಯೊಳು ಪೊರೆವರ ನಾ ಕಾಣೆ ನಿನ್ನಾಣೆ ||ಅ.ಪ|| ಆರು ನಿನ್ನ ಹೊರತೆನ್ನ ಪೊರೆವರು ನೀರಜಾಕ್ಷ ಹರಿಯೆ ಅ- ಪಾರಮಹಿಮ ಪುರಾಣಪುರುಷ ಘೋರ ದುರಿತಗಳ ದೂರ ಮಾಡಿಸೋ ||೧|| ಇಂದಿರೇಶ ಅರವಿಂದನಯನ ಎನ್ನ ತಂದೆ ತಾಯಿ ನೀನೆ ಹೊಂದಿದವರ ಅಘವೃಂದ ಕಳೆವ ಮಂದರಾದ್ರಿಧರನೇ ಶ್ರೀಧರನೆ ||೨|| ಮಂಗಳಾಂಗ ಮಹನೀಯ ಗುಣಾರ್ಣವ ಗಂಗೋದಿತ ಪಾದ ಅಂಗಜಪಿತ ಅಹಿರಾಜಶಯ್ಯ ಶ್ರೀ ರಂಗವಿಠಲ ದೊರೆಯೇ ಶ್ರೀ ಹರಿಯೇ ||೩||
ದಾಸ ಸಾಹಿತ್ಯ ಪ್ರಕಾರ
ಬರೆದವರು

ಸ್ಮರಿಸಿದವರನು ಕಾಯ್ವ ನಮ್ಮ ಸೂರ್ಯಾನೇಕ ಪ್ರಭಾವ

(ಭೈರವಿ ರಾಗ ಆದಿತಾಳ)

 

ಸ್ಮರಿಸಿದವರನು ಕಾಯ್ವ ನಮ್ಮ ಸೂರ್ಯಾನೇಕ ಪ್ರಭಾವ

ಸುರಮುನಿಗಳ ಸಂಜೀವ ಶ್ರೀ ವೆಂಕಟ ನಮ್ಮನು ಪೊರೆವ ||ಪ||

 

ವೈಕುಂಠದಿಂದ ಬಂದು ಶೇಷಾಚಲದಲಿ ನಿಂದು

ಭಕ್ತರ ಪಾಲಿಪೆನೆಂದು ಅಭಯ ದಯಾಕರ ಸಿಂಧು

ಭಕುತಿ ಮುಕುತಿಯೀವ ಮತ್ಕುಲದೇವನೆ

ಸಕಲ ಜನಸೇವಿತ ಘನ ಪರಿಪೂರ್ಣನೆ

ವಿಕಸಿತ ಕಮಲನಯನ ಕಂಜನಾಭನೆ

ಪ್ರಕಟಿತ ಶುಭಕೀರ್ತಿಯಿಂದ ಮೆರೆವನೆ ||೧||

 

ಜ್ಞಾನಿಗಳ ಗೋಚರನೆ ತನ್ನ ಧ್ಯಾನಿಪರ ಮನೋಹರನೆ

ದಾನವರ ಸಂಹರನೆ ಮಹಾದೈನ್ಯಾದಿಗಳುದ್ಧರನೆ

ಆನಂದಮಯನೆ ಅನೇಕಾವತಾರನೆ

ಅನುದಿನ ನೆನೆವರ ಹೃದಯಮಂದಿರನೆ

ಘನಮಾಣಿಕ ಭೂಷಣ ಶೃಂಗಾರನೆ

ತನುವಿನ ಕ್ಲೇಶ ದುರಿತಸಂಹರನೆ ||೨||

ದಾಸ ಸಾಹಿತ್ಯ ಪ್ರಕಾರ
ಬರೆದವರು

ಸುಮ್ಮನೆ ವೈಷ್ಣವನೆಂಬಿರಿ

(ನಾರಾಯಣಿ ರಾಗ ಆದಿತಾಳ) ಸುಮ್ಮನೆ ವೈಷ್ಣವನೆಂಬಿರಿ ಪರ- ಬೊಮ್ಮ ಸುಜ್ಞಾನವನರಿಯದ ಮನುಜನ ||ಪ|| ಮುಖವ ತೊಳೆದು ನಾಮವನಿಟ್ಟೆನಲ್ಲದೆ ಸುಖತೀರ್ಥ ಶಾಸ್ತ್ರವನೋದಿದೆನೆ ಸುಖಕೆ ಶೃಂಗಾರಕೆ ಮಾಲೆ ಹಾಕಿದೆನಲ್ಲದೆ ಭಕುತಿ ರಸದಲ್ಲಿ ಮುಳುಗಿದೆನೇನಯ್ಯ ||೧|| ಊರು ಮಾತುಗಳಾಡಿ ದಣಿದೆನಲ್ಲದೆ ನಾರಾಯಣ ಕೃಷ್ಣ ಶರಣೆಂದೆನೆ ನಾರಿಯ ನುಡಿ ಕೇಳಿ ಮರುಳಾದೆನಲ್ಲದೆ ಗುರುಹಿರಿಯರ ಮಾತ ಮನ್ನಿಸಿದೆನೇನಯ್ಯ ||೨|| ನರೋತ್ತಮರಿಗಧಿಕ ಗಂಧರ್ವರಿಗಧಿಕ ಸುರೇಂದ್ರಗಧಿಕ ಹರಗಧಿಕ ವಿರಿಂಚಿಗಧಿಕ ಸಿರಿಗಧಿಕ ಹರಿಸರ್ವೋತ್ತಮನೆಂದು ತಿಳಿದೆನೇನಯ್ಯ ||೩|| ಜಗತು ಸತ್ಯವೆಂದು ಪಂಚಭೇದವ ತಿಳಿದು ಮಿಗೆ ರಾಗದ್ವೇಷಂಗಲನು ವರ್ಜಿಸಿ ಭಗವಂತನ ಲೀಲೆ ಶ್ರವಣ ಕಥೆಗಳಿಂದ ನಿಗಮಗೋಚರನೆಂದು ತಿಳಿದೆನೇನಯ್ಯ ||೪||
ದಾಸ ಸಾಹಿತ್ಯ ಪ್ರಕಾರ
ಬರೆದವರು

ಸಾಸಿರ ಜಿಹ್ವೆಗಳುಳ್ಳ ಶೇಷನೆ ಕೊಂಡಾಡಬೇಕು

(ಮಾಳವಶ್ರೀ ರಾಗ , ಏಕತಾಳ) ಸಾಸಿರ ಜಿಹ್ವೆಗಳುಳ್ಳ ಶೇಷನೆ ಕೊಂಡಾಡಬೇಕು ವ್ಯಾಸಮುನಿರಾಯರ ಸಂನ್ಯಾಸದಿರವ ||ಪ|| ಆಸೆಯಿಂದ ತಮ್ಮುದರ ಪೋಷಣಕಾಗಿ ಛಪ್ಪನ್ನ ದೇಶವ ತಿರುಗಿ ಸಂಚಾರ ಮಾಡುತ ಮೀಸಲ ಮಡಿ ಬಚ್ಚಿಟ್ಟು ಮಿಂಚುಕೂಳನುಂಡು ದಿನ ಮೋಸಮಾಡಿ ಕಳೆವ ಸಂನ್ಯಾಸಿಗಳ ಸರಿಯೆ ||೧|| ಕೆರೆಬಾವಿ ಪುರ ಅಗ್ರಹಾರಂಗಳ ಮಾಡಿ ಭೂ- ಸುರರೊಂದು ಲಕ್ಷ ಕುಟುಂಬಗಳ ಪೊರೆವ ವೈಭವ ಕೀರ್ತಿಯಿಂದಲಿ ವ್ಯಾಸರಾ- ಯರ ಗುಣಗಣ ಗಾಂಭೀರ್ಯಾದಿಗಳ ||೨|| ಹಗಲಿರುಳೆನ್ನದೆ ಆವಾಗ ಶ್ರೀಹರಿ ಪದಪದ್ಮ- ಯುಗಳವನರ್ಚಿಸಿ ಭಕುತಿಯಿಂದ ರಘುಪತಿಭಜಕ ಬ್ರಹ್ಮಣ್ಯತೀರ್ಥರ ಕುವರ ರಂಗವಿಠಲನನ್ನು ಬಿಡೆಬಿಡೆನು ಎಂಬ ||೩||
ದಾಸ ಸಾಹಿತ್ಯ ಪ್ರಕಾರ
ಬರೆದವರು