ಶ್ರೀ ವಾದಿರಾಜ ಯತಿಗಳ ರಚನೆ

ಯಾಕೆ ಬಾಗಿಲ ಹಾಕಿರುವೆ ಕೋಕಿಲೇಶ್ವರಿ ವಾಣಿ

'ಯಾಕೆ ಬಾಗಿಲ ಹಾಕಿರುವೆ ಕೋಕಿಲೇಶ್ವರಿ ವಾಣಿ'
ರಚನೆ: ಶ್ರೀ ವಾದಿರಾಜ ಸ್ವಾಮಿಗಳು


ಯಾಕೆ ಬಾಗಿಲ ಹಾಕಿರುವೆ ಕೋಕಿಲೇಶ್ವರಿ ವಾಣಿ   || ಪ ||
ಆರು ನಾನರಿಯೆ ನೀ ಸರಿರಾತ್ರಿಯಲಿ ಬಂದೀ   || ಅ ||

ನೀರೊಳು ಮುಳುಗಿ ನಿಗಮಚೋರನ ಕೊಂದ ನೀರಜಾಕ್ಷನೆ ಭಾಮೆ ನಾನು
ನಾರುವ ಮೈಯ್ಯ ಎನ್ನೊಳು ತೋರದೆ ಸಾರಿ ದೂರ ನೀ ಪೋಗೋ ರಂಗ   || 1 ||

ಮಂದರಗಿರಿಯನು ಬೆನ್ನೊಳಗಿಟ್ಟ೦ತ ಸುಂದರವದನನೇ ಭಾಮೆ ನಾನು
ಇಂದು ನಿನಗೆ ತಕ್ಕ ಭಾರಂಗಳಿಲ್ಲವಯ್ಯ ಸಿಂಧುವಿನೊಳಗೆ ಪೋಗೋ ರಂಗ   || 2 ||

ದಾಸ ಸಾಹಿತ್ಯ ಪ್ರಕಾರ