ಶ್ರೀಪಾದರಾಯ

ಈ ವನದೆಡೆಗಳು ಈ ಲತೆವನಗಳು

(ಭೈರವಿ ರಾಗ ) ( ಧ್ರುವತಾಳ) ಈ ವನದೆಡೆಗಳು ಈ ಲತೆವನಗಳು ಈನದಿಪುಳಿನಗಳೀ ಶಶಿಶಿಲೆಗಳು ಸುರತರು ನೆಳಲು ಶುಕಪಿಕರವ ಯಾಕೆ ಮಾಧವನ ಮರೆಯಲೀಯದಿವೆ ಕೆಳದಿ ಆ ಮುಗುಳುನಗೆಯ ಆ ಸೊಬಗ ಈಸುರತರು ನೆಳಲೀ ರತಿಯ ಈ ಸುರತವನರಿದ ಬಾಲೆಯರೆಂತೊ ಈ ಸುಗುಣಮಯ ರಂಗವಿಠಲನೆ ಕೆಳದಿ ೧ (ಮಠ್ಠ್ಯ ತಾಳ) ಇನ್ನು ರಂಗನಂಗಸಂಗವು ಎತ್ತಣದು ಗೋಪಿಯರಿಗೆ ಮಧುರೆಯ ಮಾನಿನಿಯರ ಬಲೆಯಲ್ಲಿ ಸಿಲುಕಿದನ ಮಧುರೆಯ ಮಾನಿನಿಯರು ರತಿವಿದಗ್ಧರಾ ವಧುಗಳು ರಸಿಕ ನಮ್ಮ ರಂಗವಿಠಲ ೨ (ತ್ರಿಪುಟ ತಾಳ) ಇನ್ಯಾತಕೆ ರಂಗ ಇಲ್ಲಿಗೆ ಬಾಹಾ ಮಧುರಾಪುರಿಯರಸನಾದ ಮಲ್ಲರ ಕೊಂದು ಮಾವನ್ನ ಮಡುಹಿದ ಮಧುರಾಪುರಿಯರಸನಾದ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಇದಿರದಾವನು ನಿನಗೀ ಧರೆಯೊಳು

(ಪೂರ್ವಿ ರಾಗ ಆದಿತಾಳ) ಇದಿರದಾವನು ನಿನಗೀ ಧರೆಯೊಳು ಪದುಮನಾಭನ ದಾಸ ಪರಮೋಲ್ಲಾಸಾ ||ಪ|| ವಾದಿತಿಮಿರಮಾರ್ತಾಂಡನೆಂದೆನಿಸಿದ ವಾದಿಶರಭಭೇರುಂಡ ವ್ಯಾಸರಾಯಾ ||೧|| ಯತಿಗಳೊಳಗೆ ನಿಮ್ಮಂದದದವರುಗಳ ಪ್ರತಿಗಾಣೆನು ಈ ಕ್ಷಿತಿಯೊಳು ಯತಿರಾಯಾ ||೨|| ಹಮ್ಮನಳಿದು ಶ್ರೀಪತಿ ರಂಗವಿಠಲನ್ನ ಸುಮ್ಮಾನದಿಂ ಸೇವಿಪ ವ್ಯಾಸಮುನಿರಾಯಾ ||೩||
ದಾಸ ಸಾಹಿತ್ಯ ಪ್ರಕಾರ
ಬರೆದವರು

ಇದನಾದರು ಕೊಡದಿದ್ದರೆ ನಿನ್ನ ಪದಕಮಲವ ನಂಬಿ ಭಜಿಸುವದೆಂತೊ

(ಕೇದಾರಗೌಳ ರಾಗ ಆದಿತಾಳ) ಇದನಾದರು ಕೊಡದಿದ್ದರೆ ನಿನ್ನ ಪದಕಮಲವ ನಂಬಿ ಭಜಿಸುವದೆಂತೊ ||ಪ|| ಗ್ರಾಸವಾಸಗಳಿಗೆ ಇಲ್ಲವೆಂದು ನಿನ್ನ ಬೇಸರಿಸಿ ಬೇಡ ಬಂದುದಿಲ್ಲ ವಾಸುದೇವನೆ ನಿನ್ನ ದಾಸರ ದಾಸರ ದಾಸರ ದಾಸ್ಯವ ಕೊಡು ಸಾಕೆಂದರೆ ||೧|| ಸತಿಸುತರುಗಳ ಸಹಿತನಾಗಿ ನಾ ಹಿತದಿಂದ ಇರಬೇಕೆಂಬೊದಿಲ್ಲ ಇತರ ವಿಷಯಂಗಳಿಗೆರಗಿಸದೆ ಮನಕೆ ನಿನ್ನ ಕಥಾಮೃತವನೆ ಕೊಡು ಸಾಕೆಂದರೆ ||೨|| ಸಾಲವಾಯಿತು, ಸಂಬಳ ಎನಗೆ ಸಾಲದೆಂದು ಬೇಡ ಬಂದುದಿಲ್ಲ ನಾಲಗೆಯಲಿ ನಿನ್ನ ನಾಮದುಚ್ಚರಣೆಯ ಪಾಲಿಸಬೇಕೆಂದು ಬೇಡಿದೆನಲ್ಲದೆ ||೩|| ಒಡವೆ ಒಡ್ಯಾಣಗಳಿಲ್ಲೆಂದು ಬಡವನೆಂದು ಬೇಡಬಂದುದಿಲ್ಲ ಒಡೆಯ ನಿನ್ನಡಿಗಳಿಗೆರಗುವುದಕೆ ಮನ ಬಿಡದಿಹದೊಂದನು ಕೊಡು ಸಾಕೆಂದರೆ ||೪|| ಆಗಬೇಕು ರಾಜ್ಯಭೋಗಗಳೆನಗೆಂದು
ದಾಸ ಸಾಹಿತ್ಯ ಪ್ರಕಾರ
ಬರೆದವರು

ಇಟ್ಹಾಂಗೆ ಇರುವೆನೊ ಹರಿಯೇ ಎನ್ನ ದೊರೆಯೇ

(ಸಾವೇರಿ ರಾಗ ಆದಿತಾಳ) ಇಟ್ಹಾಂಗೆ ಇರುವೆನೊ ಹರಿಯೇ ಎನ್ನ ದೊರೆಯೇ ||ಪ|| ಸೃಷ್ಟಿವಂದಿತ ಪಾದಪದುಮ ಶ್ರೀಹರಿಯೇ ||ಅ.ಪ|| ಸಣ್ಣ ಶಾಲ್ಯೋದನ ಬೆಣ್ಣೆ ಕಾಸಿದ ತುಪ್ಪ ಚಿನ್ನದ ಹರಿವಾಣದಲಿ ಭೋಜನ ಘನ್ನಮಹಿಮ ನಿನ್ನ ಕರುಣ ತಪ್ಪಿದ ಮ್ಯಾಲೆ ಕ- ದನ್ನ ಕಾಣದೆ ಬಾಯ್ಬಿಡಿಸುವಿ ಹರಿಯೇ ||೧|| ಕೆಂಪಿಲಿ ಪೊಳೆವ ಪೀತಾಂಬರ ಉಡಿಸುವಿ ಸೊಂಪಿನಂಚಿನ ಶಾಲು ಹೊದಿಸುವಿಯೋ ಕಪಿಲಹರೇ ನಿನ್ನ ಕೃಪೆಯು ತಪ್ಪಿದ ಮ್ಯಾಲೆ ಕಪರ್ದಕ ಕೌಪೀನವು ದೊರೆಯದೊ ಹರಿಯೇ ||೨|| ಚಂದ್ರಶಾಲೆಲಿ ಚಂದ್ರಕಿರಣದಂತೊಪ್ಪುವ ಚಂದದ ಮಂಚದೊಳ್ ಮಲಗಿಸುವಿ ಮಂದರೋದ್ಧರ ನಿನ್ನ ಮಮತೆ ತಪ್ಪಲು ಧರ್ಮ- ಮಂದಿರದೊಳು ತೋಳ್ತಲಗಿಂಬು ಹರಿಯೇ ||೩|| ನರಯಾನದೊಳು ಕ್ಷಣ ನರವರನೆನಿಸುವಿ ವರಛತ್ರ ಚಾಮರ ಹಾಕಿಸುವಿ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಇಕ್ಕೋ ನೋಡೆ ರಂಗನಾಥನ ಚಿಕ್ಕಪಾದವ

( ಮಧ್ಯಮಾವತಿ ರಾಗ ಏಕತಾಳ) ಇಕ್ಕೋ ನೋಡೆ ರಂಗನಾಥನ ಚಿಕ್ಕಪಾದವ ||ಪ|| ಸಿಕ್ಕಿತೆ ಶ್ರೀ ಲಕ್ಷ್ಮೀಪತಿಯ ದಿವ್ಯಪಾದವ ||ಅ.ಪ|| ಶಂಖ ಚಕ್ರ ಗದಾ ಪದ್ಮ ಅಂಕಿತ ಪಾದವ ಅಂಕುಶ ಕುಲಿಶ ಧ್ವಜರೇಖಾ ಅಂಕಿತ ಪಾದವ ಪಂಕಜಾಸನನ ಹೃದಯದಲ್ಲಿ ನಲಿಯುವ ಪಾದವ ಸಂಕಟಹರಣ ವೆಂಕಟೇಶನ ದಿವ್ಯ ಪಾದವ ||೧|| ಲಲನೆ ಲಕ್ಷ್ಮಿಯಂಕದಲ್ಲಿ ನಲಿಯುವ ಪಾದವ ಜಲಜಾಸನನ ಅಭೀಷ್ಟವೆಲ್ಲ ಸಲಿಸುವ ಪಾದವ ಮಲ್ಲರ ಗೆಲಿದು ಕಂಸಾಸುರನ ಕೊಂದ ಪಾದವ ಬಲಿಯ ಮೆಟ್ಟಿ ಭಾಗೀರಥಿಯ ಪಡೆದ ಪಾದವ ||೨|| ಬಂಡೆಯ ಬಾಲೆಯ ಮಾಡಿದ ಉದ್ದಂಡ ಪಾದವ ಬಂಡಿಲಿದ್ದ ಶಕಟಾಸುರನ ಒದ್ದ ಪಾದವ ಅಂಡಜ ಹನುಮರ ಭುಜದೊಳೊಪ್ಪುವ ಪಾದವ ಕಂಡೆವೆ ಶ್ರೀರಂಗವಿಠಲನ ದಿವ್ಯಪಾದವ ||೩||
ದಾಸ ಸಾಹಿತ್ಯ ಪ್ರಕಾರ
ಬರೆದವರು

ಅನ್ನಂತ ಕಾಲದಲ್ಲಿ ನಿನ್ನ ನಾನರಿಯದೆ ಭವಗಳಲ್ಲಿ ಬಂದೆನೊ

( ನಾಟಿ ರಾಗ , ಧ್ರುವತಾಳ) ಅನ್ನಂತ ಕಾಲದಲ್ಲಿ ನಿನ್ನ ನಾನರಿಯದೆ ಭವಗಳಲ್ಲಿ ಬಂದೆನೊ ಅನ್ನಂತ ಕಾಲದಲ್ಲಿ ನಿನ್ನವನೆನಿಸದೆ ಮೂರುಖನಾದೆನೊ ಅನ್ನಂತ ಕಾಲದಲ್ಲಿ ನಿನ್ನ ಚರಣರತಿಯಿಲ್ಲದೆ ನೊಂದೆನೊ ಅನ್ನಂತ ಕಾಲದಲ್ಲಿ ಅದಾವ ಪುಣ್ಯದಿಂದ ಬಂದು ಇಂದು ನಿನ್ನವನೆನಿಸಿದೆ ಅದಾವ ಪುಣ್ಯದಿಂದಲೆನ್ನ ಮನ ನಿನ್ನಲ್ಲೆರಗಿತೊ ನೋಯದಂತೆ ಎನ್ನ ಪೊರೆದು ಪಾಲಿಸೊ ದೀನನಾಥ ಶ್ರೀರಂಗವಿಠಲ ೧ (ಮಠ್ಯತಾಳ) ಅನ್ನಕ ಭಯದ್ರವಿಣ ದೇಹನಿಮಿತ್ತ ಅನ್ನಕ ಶೋಕಾಶಯ ಮಾರಿ ಅನ್ನಕ ಲೋಭ ಅಶುಭದ ಲಾಭ ಅನ್ನಕ ನನ್ನದು ನಾನೆಂಬಹಮ್ಮಿಕೆ ಆವನ್ನಕ ನಿನ್ನ ಚರಣರತಿ ದೊರಕೊಳ್ಳದೊ ಉನ್ನಂತ ಗುಣಪರಿಪೂರ್ಣ ರಂಗವಿಠಲ ೨ (ತ್ರಿಪುಟತಾಳ)
ದಾಸ ಸಾಹಿತ್ಯ ಪ್ರಕಾರ
ಬರೆದವರು

ಅಕಟಕಟ ಸಂಸಾರವನು ನೆಚ್ಚಿ ಕೆಡಬ್ಯಾಡ

(ಕಲ್ಯಾಣಿ ರಾಗ ಝಂಪೆತಾಳ)

ಅಕಟಕಟ ಸಂಸಾರವನು ನೆಚ್ಚಿ ಕೆಡಬ್ಯಾಡ ||ಪ||

ವಿಕಟದಲಿ ಮಾನವರು ಕೆಟ್ಟರೆಲ್ಲರು ನಿಜ ||ಅ.ಪ||

 

ಮುನ್ನ ನರಕಾಸುರನು ಬಡಿದು ಚಿಂತಾಮಣಿಯ

ತನ್ನ ಮನೆಯಲಿ ತಂದು ನಿಲ್ಲಿಸಿ ನೃಪರ

ಕನ್ನೆಯರ ಷೋಡಶಸಹಸ್ರವನೆ ತಂದಾತ

ಹೆಣ್ಣನೊಬ್ಬಳನೊಯ್ದುದಿಲ್ಲವೊ ನೋಡೊ ||೧||

 

ಸಾವಿರ ಕರ ಪಡೆದ ಕಾರ್ತವೀರ್ಯಾರ್ಜುನನು

ಭೂವಲಯದೊಳಗೇ ವೀರನೆನಿಸಿ

ರಾವಣನ ಸೆರೆಯಿಟ್ಟು ಕಾಮಧೇನುವ ಬಯಸಿ

ಸಾವಾಗ ಏನು ಕೊಂಡೊಯ್ದನೋ ನೋಡೊ ||೨||

 

ಕೌರವನು ಧರೆಯೆಲ್ಲ ತನಗಾಗಬೇಕೆಂದು

ವೀರಪಾಂಡವರೊಡನೆ ಕದನಮಾಡಿ

ಮಾರಿಯ ವಶವೈದಿ ಹೋಹಾಗ ತನ್ನೊಡನೆ

ದಾಸ ಸಾಹಿತ್ಯ ಪ್ರಕಾರ
ಬರೆದವರು

ಮೊದಲೊಂದಿಪೆ ನಿಮಗೆ ಗಣನಾಥ

ಮೊದಲೊಂದಿಪೆ ನಿಮಗೆ ಗಣನಾಥ ||ಪ| ನಮಗೆ ಬಂದ ವಿಘ್ನಗಳ ಕಳೆ ಗಣನಾಥ |ಅ ಪ| ಹಿಂದೆ ರಾವಣನು ಮದದಿಂದ ನಿನ್ನ ಪೂಜಿಸದೆ ಸಂದ ರಣದಲಿ ಗಣನಾಥ |೧| ಆದಿಯಲ್ಲಿ ಧರ್ಮರಾಜ ಪೂಜಿಸಿದ ನಿಮ್ಮ ಪಾದ ಸಾಧಿಸಿದ ರಾಜ್ಯ ಗಣನಾಥ |೨|
ದಾಸ ಸಾಹಿತ್ಯ ಪ್ರಕಾರ
ಬರೆದವರು

ಬೆನಕನನೊಲ್ಲೆನವ್ವ

ಬೆನಕನನೊಲ್ಲೆನವ್ವ ಕುಲುಕಿ ನಡಿಯುವವನ ಷಣ್ಮುಖನನೊಲ್ಲೆನವ್ವ ಹಲವು ಬಾಯವನ ಇಂದ್ರನನೊಲ್ಲೆನವ್ವ ಮೈಗಣ್ಣಿನವನ ಚಂದ್ರನನೊಲ್ಲೆನವ್ವ ಕ್ಷಯರೋಗದವನ ಸೂರ್ಯನನೊಲ್ಲೆನವ್ವ ಉರಿದು ಮೂಡುವವನ ಹರನ ನಾನೊಲ್ಲೆನವ್ವ ಹಣೆಗಣ್ಣಿನವನ ಜನಕೆಲ್ಲ ಚೆಲುವನ ಜಗಕೆಲ್ಲ ಒಡೆಯನ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಮೋಸ ಹೋದೆನಲ್ಲ

ರಾಗ: ಸುರಟಿ ಆದಿತಾಳ ಮೋಸ ಹೋದೆನಲ್ಲ ಸಕಲವು ವಾಸುದೇವ ಬಲ್ಲ ಭಾಸುರಾಂಗ ಶ್ರೀ ವಾಸುಕಿಶಯನನ ಸಾಸಿರ ನಾಮವ ಲೇಸಾಗಿ ಪಠಿಸದೆ* |ಪ| ದುಷ್ಟ ಜನರ ಕೂಡಿ ನಾನತಿ ಭ್ರಷ್ಟನಾದೆ ನೋಡಿ ಶ್ರೇಷ್ಠರೂಪ ಮುರ ಮುಷ್ಟಿಕ ವೈರಿಯ ನಿಷ್ಠೆಯಿಂದ ನಾ ದೃಷ್ಟಿಸಿ ನೋಡದೆ
ದಾಸ ಸಾಹಿತ್ಯ ಪ್ರಕಾರ
ಬರೆದವರು