ವೇಂಕಟೇಶ ಬೇಡಿಕೊಂಬೆ

ರಾಗ ಆರಭಿ/ಆದಿ ತಾಳ ವೇಂಕಟೇಶ ಬೇಡಿಕೊಂಬೆ ಕೃಪೆಯ ಪಾಲಿಸೋ, ಬ್ರಹ್ಮ || ಪಲ್ಲವಿ || ಶಂಕರಾದಿ ವಂದ್ಯ ಎನಗೆ ಮುಕ್ತಿ ತೋರಿಸೊ || ಅನು ಪಲ್ಲವಿ || ನಷ್ಟ ಮೊದಲಾದಂಥ ಕಷ್ಟ ಬಿಡಿಸೋ, ನಿನ್ನ ಪಟ್ಟದ ರಾಣಿಗೆ ಹೇಳಿ ಪದವಿ ಕೊಡಿಸೊ ಇಷ್ಟ ಭಕ್ತ ಜನರೊಳು ಎನ್ನ ಸೇರಿಸೊ ಈ
ದಾಸ ಸಾಹಿತ್ಯ ಪ್ರಕಾರ

ನಿನ್ನ ನೋಡಿ ಧನ್ಯನಾದೆನೋ

ರಾಗ ಶಂಕರಾಭರಣ/ರೂಪಕ ತಾಳ ನಿನ್ನ ನೋಡಿ ಧನ್ಯನಾದೆನೋ, ಹೇ ಶ್ರೀನಿವಾಸ || ಪಲ್ಲವಿ || ನಿನ್ನ ನೋಡಿ ಧನ್ಯನಾದೆ ಎನ್ನ ಮನೋನಯನಕೀಗ ಲಿನ್ನು ದಯಮಾಡು ಸುಪ್ರಸನ್ನ ಸ್ವಾಮಿ ಪಾಂಡುರಂಗ || ಅನುಪಲ್ಲವಿ || ಪಕ್ಷಿವಾಹನ ಲಕ್ಷ್ಮೀರಮಣ ಲಕ್ಷ್ಮೀ ನಿನ್ನ ವಕ್ಷದಲ್ಲಿ
ದಾಸ ಸಾಹಿತ್ಯ ಪ್ರಕಾರ
ಬರೆದವರು

ನಾರಾಯಣ ತೇ ನಮೋ ನಮೋ

ರಾಗ ಪೀಲು/ಆದಿ ತಾಳ ನಾರಾಯಣ ತೇ ನಮೋ ನಮೋ ಭವ ನಾರದ ಸನ್ನುತ ನಮೋ ನಮೋ || ಪಲ್ಲವಿ || ಮುರಹರ ನಗಧರ ಮುಕುಂದ ಮಾಧವ ಗರುಡಗಮನ ಪಂಕಜ ನಾಭ ಪರಮಪುರುಷ ಭವ ಭಂಜನ ಕೇಶವ ನರಹರಿ ಶರೀರ ನಮೋ ನಮೋ || ೧ || ಜಲಧಿ ಶಯನ ರವಿ ಚಂದ್ರ ವಿಲೋಚನ ಜಲರುಹ ಭವನುತ ಚರಣ ಯುಗ ಬಲಿಭಂಜನ ಗೋವರ್ಧನವಲ್ಲಭ
ದಾಸ ಸಾಹಿತ್ಯ ಪ್ರಕಾರ
ಬರೆದವರು

ತಾರಮ್ಮಯ್ಯ, ಯದುಕುಲ ವಾರಿಧಿ ಚಂದ್ರಮನ

ರಾಗ ನಾದನಾಮಕ್ರಿಯ/ಆದಿ ತಾಳ ತಾರಮ್ಮಯ್ಯ, ಯದುಕುಲ ವಾರಿಧಿ ಚಂದ್ರಮನ || ಪಲ್ಲವಿ || ಮಾರಜನಕನ ಮೋಹನಾಂಗನ ಸೇರಿ ಸುಖಿಸಲು ಹಾರೈಸಿ ಬಂದೆವು || ಅನು ಪಲ್ಲವಿ || ಬಿಲ್ಲ ಹಬ್ಬಗಳಂತೆ, ಅಲ್ಲಿ ಬೀದಿ ಶೃಂಗಾರವಂತೆ ಮಲ್ಲರ ಕಾಳಗ ಮದ್ದಾನೆಯಂತೆ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಬೃಂದಾವನ ನೋಡಿದೆ

ರಚನೆ : ವೆಂಕಟವಿಠಲ ಗಾಯಕಿ : ಸುಲೋಚನ ಬೃಂದಾವನ ನೋಡಿದೆ ರಾಘವೇಂದ್ರರ ಬೃಂದಾವನ ನೋಡಿದೆ ಬೃಂದಾವನ ನೋಡಿ ಚಂದದಿ ದ್ವಾದಶಪುಂಡ್ರಾಕಿಂತಗೊಂಡ ||ಪಲ್ಲವಿ|| ತುಂಗಭದ್ರಾ ನದಿಯ ತೀರದಿ ಇದ್ದು ತುಂಗಾ ಮಂಟಪ ಮಧ್ಯದಿ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಬಾರಯ್ಯ ವೆಂಕಟರಮಣ

ಪಲ್ಲವಿ: ಬಾರಯ್ಯ ವೆಂಕಟರಮಣ ಭಾಗ್ಯದ ನಿಧಿಯೆ ಅನುಪಲ್ಲವಿ: ಬಾರೊ ವಿಶ್ವಂಭರನೇ ಬಾರೋ ಭಕ್ತರ ಸಲಹುವನೇ ಬಾರೋ ಚರಣಗಳು: ೧: ವೇದ ಗೋಚರನೇ ಬಾರೋ ಆದಿ ಕಚ್ಛಪ ನೀ ಬಾರೋ ಮೋದಸೂಕರ ಬಾರೋ ಸದಯಾ ನರಸಿಂಹ ಬಾರೋ ೨: ವಾಮನ ಭಾರ್ಗವನೆ ಬಾರೋ ರಾಮಕೃಷ್ಣನೆ ನೀ ಬಾರೋ
ದಾಸ ಸಾಹಿತ್ಯ ಪ್ರಕಾರ
ಬರೆದವರು

ದಾಸರೆಲ್ಲರ 'ವಸ್ತು' ಒಂದೇ ಆಗಿದ್ದರೂ, ಸಮಾಜಿಕ ದೃಷ್ಟಿಕೋನ ಅಪೂರ್ವವಾದದ್ದು

ಹಬ್ಬ ಹರಿದಿನಗಳಿದ್ದಾಗ ನಮ್ಮೂರಲ್ಲಿ ಭಜನೆ-ಕೀರ್ತನೆಗಳ ಮಹಾಪೂರವೇ ಹರಿಯುತ್ತದೆ. ಊರಿನ ಜನ ಧರ್ಮ-ತತ್ವ-ನೀತಿಗಳನ್ನೊಳಗೊಂಡ ಭಜನೆ-ಕೀರ್ತನೆಗಳನ್ನು ಮನದಣಿಯುವತನಕ ಹಾಡಿ ಮೈಮರೆಯುತ್ತಾರೆ.ಕೆಲವೊಮ್ಮೆ ನಾನು ಸಹ ಆ ಕೀರ್ತನೆಗಳನ್ನು ಕೇಳಿದ್ದುಂಟು. "ಅಂಬಿಗ ನಾ ನಿನ್ನ ನಂಬಿದೆ", "ಎನ್ನ ಮನದ ಡೊಂಕು ತಿದ್ದೇಯಾ...", "ಗಿಳಿಯು ಪಂಜರದೊಳಿಲ್ಲ..", "ಮಾನವ ಜನ್ಮ ದೊಡ್ಡದೊ.." ಹಾಗು ಅನೇಕ ಹಾಡುಗಳು ಪದೇ ಪದೇ ಕಿವಿಯ ಮೇಲೆ ಬೀಳುತ್ತಲೇ ಇರುತ್ತವೆ. ಬಹಳ ದಿನಗಳಿಂದ ಕನ್ನಡ ಸಾಹಿತ್ಯದಲ್ಲಿ ಹಚ್ಚ ಹಸುರಾಗುಳಿದ ಕೀರ್ತನಕಾರರ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಬೇಕೆಂಬ ಆಸೆ ಇದ್ದರೂ ಸೋಮಾರಿತನದಿಂದ ಅದರ ಗೊಡವೆಗೆ ಹೋಗಿರಲಿಲ್ಲ. ಕೊನೆಗೂ ಆ ಸಾಹಸ ಮಾಡಿದೆ. ಇಡೀ ದಾಸ ಸಾಹಿತ್ಯವನ್ನು ಅವಲೋಕಿಸಿದರೆ, ದಾಸರೆಲ್ಲಾ ಹಾಡಿದ್ದನ್ನೆ ಹಾಡಿದ್ದಾರಲ್ಲ ಎನಿಸಿಬಿಡುತ್ತದೆ. ಯಾವುದೇ ಕೀರ್ತನೆಯನ್ನು ತೆಗೆದುಕೊಳ್ಳಿ ಅದರ ಉದ್ದೇಶ ಇಷ್ಟೆ, "ಆತ್ಮವಿಮರ್ಶೆ, ಆತ್ಮನಿಂದನೆ, ಮೋಕ್ಷ, ಮುಕ್ತಿ, ತತ್ವ ಮತ್ತು ನೀತಿ." ಆಧುನಿಕ ಕನ್ನಡ ಸಾಹಿತ್ಯವನ್ನು ಹೊರತುಪಡಿಸಿದರೆ, ಇಡೀ ಕನ್ನಡ ಸಾಹಿತ್ಯದಲ್ಲಿ ಕಾಣುವ ಸಾಹಿತ್ತಿಕ ವಸ್ತು ಬರೀ "ಧರ್ಮ-ತತ್ವ-ನೀತಿ" ಮಾತ್ರ. ೧೨ನೇ ಶತಮಾನದ ವಚನಕಾರರಿಗಿಂತ ಮುಂಚೆ ಪಂಪನ ಕಾಲದಲ್ಲಿ (ಪಂಪಯುಗದಲ್ಲಿ) ಕವಿಗಳು ಹೇಳಿದ್ದಿಷ್ಟೆ, "ಸಾಹಿತ್ಯ ಇರುವುದು ಜನರ ಶ್ರೇಯಸ್ಸನ್ನು ಸಾಧಿಸಲು. ಇದು ಪಾಪ, ಇದು ಪುಣ್ಯ, ಇದು ಹಿತ, ಇದು ಅಹಿತ, - ಎನ್ನುವುದನ್ನು ತಿಳಿಯ ಹೇಳಲು. ಒಟ್ಟಿನಲ್ಲಿ ಪುರುಷಾರ್ಥ ಪ್ರಾಪ್ತಿಗೋಸ್ಕರ [ಜಿ. ಎಸ್. ಶಿವರುದ್ರಪ್ಪ, ಸಾಮಾನ್ಯನಿಗೆ ಸಾಹಿತ್ಯ ಚರಿತ್ರೆ]." ಕೆಲವೊಮ್ಮೆ ಧರ್ಮದ ಉದ್ದೇಶವೇ ಕಾವ್ಯದ ಉದ್ದೇಶವಾಗಿದ್ದುಂಟು. ಪಂಪನ ನಂತರ ೧೨ನೇ ಶತಮಾನದಲ್ಲಿ ಬಂದ ವಚನಕಾರರು ಸಾಮಾಜಿಕ ಕ್ರಾಂತಿಯನ್ನೇ ಮಾಡಿದ್ದರು. ಆದರೆ ಅವರ ಸಾಹಿತ್ಯದ ವಸ್ತು ಮಾತ್ರ ಮತ್ತೆ ಅದೇ, "ಧರ್ಮ-ತತ್ವ-ನೀತಿ". ೧೫ನೇ ಶತಮಾನದಲ್ಲಿ ಬಂದ ಕುಮಾರವ್ಯಾಸನು ಕೂಡ ಸಾಹಿತ್ಯದ ವಸ್ತುವಿನ ಆಯ್ಕೆಯಲ್ಲಿ ಪಂಪನ ಹಾದಿಯನ್ನೇ ಹಿಡಿದನು. ವಚನಕಾರರ ನಂತರ ಬಂದ ವ್ಯಾಸರಾಯರು, ಪುರಂದರದಾಸರು, ಕನಕದಾಸರು ಕೂಡ ತಮ್ಮ ಕೀರ್ತನೆಗಳ ವಸ್ತುವಿನ ಆಯ್ಕೆಯಲ್ಲಿ ಹೆಚ್ಚು ಕಮ್ಮಿ ವಚನಕಾರರ ಹಾದಿಯನ್ನೇ ಹಿಡಿದರು. ’ಪಂಪ-ಕುಮಾರವ್ಯಾಸರು’ ಮತ್ತು ’ವಚನಕಾರರು-ದಾಸರಲ್ಲಿರುವ’ ವ್ಯತ್ಯಾಸ ಇಷ್ಟೆ, "ಪಂಪ-ಕುಮಾರವ್ಯಾಸರು ಸಂಸಾರಿಕ ಜೀವನದ ನಶ್ವರತೆಯನ್ನು ಎತ್ತಿಹಿಡಿದು, ಮೋಕ್ಷವೇ ಜೀವನದ ಅಂತಿಮ ಗುರಿ ಎಂದರು. ಆದರೆ ವಚನಕಾರರು-ದಾಸರು ಸಂಸಾರಿಕ ಜೀವನವನ್ನು ಅತ್ಯಂತ ಸಹಾನುಭೂತಿಯಿಂದ ನೋಡಿ, ಸಂಸಾರದಲ್ಲಿದ್ದುಕೊಂಡೇ ಭಗವಂತನ ಸಹಾಯದಿಂದ ಮುಕ್ತಿಯನ್ನು ಪಡೆಯಬಹುದೆಂದರು." ನಂತರ ಬಂದ ಹರಿಹರ ಕೂಡ ರಗಳೆಗಳ ರೂಪದಲ್ಲಿ ಭಕ್ತಿಯ ಮಾರ್ಗವನ್ನೇ ಹಿಡಿದ, ರಾಘವಾಂಕ ಮತ್ತೆ ಪಂಪ-ಕುಮಾರವ್ಯಾಸರ ಹಾದಿಯನ್ನು ತುಳಿದ. ಇಡೀ ಕನ್ನಡ ಸಾಹಿತ್ಯದಲ್ಲಿ ಆಧುನಿಕ ಕನ್ನಡ ಸಾಹಿತ್ಯ ಮಾತ್ರ ವೈವಿಧ್ಯತೆಯಿಂದ ಕೂಡಿದೆ ಅನಿಸುತ್ತದೆ. ಸಾಹಿತ್ತಿಕ ವಸ್ತುವಿನ ದೃಷ್ಟಿಯಿಂದ ಅದೇನೆ ಇದ್ದರೂ, ಸಾಮಾಜಿಕ ಮತ್ತು ಸಂಗೀತದ ದೃಷ್ಟಿಯಿಂದ ವಚನಕಾರರ ಮತ್ತು ದಾಸರ ಕೊಡುಗೆ ಅಪೂರ್ವವಾದುದು. ಬಸವಾದಿ ಶರಣರು ಕನ್ನಡ ಸಾಹಿತ್ಯಕ್ಕೆ ವಚನಗಳೆಂಬ ಅಪೂರ್ವ ಕಾಣಿಕೆ ಕೊಟ್ಟಂತೆ ಪುರಂದರಾದಿ ದಾಸರು ಕೀರ್ತನೆಳಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದರು.
ದಾಸ ಸಾಹಿತ್ಯ ಪ್ರಕಾರ
ಬರೆದವರು

ಗಜವದನ ಬೇಡುವೇ

ಪಲ್ಲವಿ ಗಜವದನ ಬೇಡುವೇ ಗೌರಿ ತನಯ ತ್ರಿಜಗ ವಂದಿತನೇ ಸುಜನರ ಪೊರೆವನೇ ಅನುಪಲ್ಲವಿ ಪಾಶಾಂಕುಶಧರ ಪರಮ ಪವಿತ್ರ ಮೂಷಿಕವಾಹನ ಮುನಿಜನಪ್ರೇಮಾ (ಗಜವದನ) ಚರಣ ಮೋದದಿ ನಿನ್ನಯ ಪಾದವ ತೋರೋ ಸಾಧು ವಂದಿತನೆ ಆದರದಿಂದಲಿ (ಗಜವದನ) ಸರಸಿಜನಾಭ ಶ್ರಿ ಪುರಂದರ ವಿಠಲನ
ದಾಸ ಸಾಹಿತ್ಯ ಪ್ರಕಾರ
ಬರೆದವರು

ದಯಮಾಡೋ ರಂಗ

ಪಲ್ಲವಿ ದಯಮಾಡೋ ರಂಗ ದಯಮಾಡೋ ದಯಮಾಡೋ ನಿನ್ನ ದಾಸನೆಂದೆಣಿಸಿ ಅನುಪಲ್ಲವಿ ಹಲವು ಕಾಲದಿ ನಿನ್ನ ಹಂಬಲ ಎನಗೆ ಒಲಿದು ಪಾಲಿಸಬೇಕು ವಾರಿಜನಾಭ ಚರಣಳು: ಇಹ ಪರ ಗತಿ ನೀನೇ ಇಂದಿರ ರಮಣ ಸಹಾಯ ನಿನ್ನದೆ ಸರ್ವದಾ ತೋರಿ ಕರುಣ ಕರಿರಾಜ ವರದನೇ ಕಾಮಿತ ಫಲದ
ದಾಸ ಸಾಹಿತ್ಯ ಪ್ರಕಾರ
ಬರೆದವರು
ಬಗೆ

ಭಾಗ್ಯದ ಲಕ್ಷ್ಮೀ ಬಾರಮ್ಮಾ

ಭಾಗ್ಯದ ಲಕ್ಷ್ಮೀ ಬಾರಮ್ಮಾ ನಮ್ಮಮ್ಮ ನೀ ಸೌ (ಭಾಗ್ಯದ) ಹೆಜ್ಜೆಯ ಮೇಲೆ ಹೆಜ್ಜೆಯನಿಕ್ಕುತ ಗೆಜ್ಜೆ ಕಾಲ್ಗಳ ಧ್ವನಿಯ ತೋರುತ ಸಜ್ಜನ ಸಾಧು ಪೂಜೆಯ ವೇಳೆಗೆ ಮಜ್ಜಿಗೆಯೊಳಗಿನ ಬೆಣ್ಣೆಯಂತೆ (ಭಾಗ್ಯದ) ಕನಕ ವೃಷ್ಟಿಯ ಕರೆಯುತ ಬಾರೆ ಮನ ಕಾಮನೆಯ ಸಿದ್ಧಿಯ ತೋರೇ
ದಾಸ ಸಾಹಿತ್ಯ ಪ್ರಕಾರ
ಬರೆದವರು