ಆನಂದ ಆನಂದ ಮತ್ತೆ ಪರಮಾನಂದ

ಆನಂದ ಆನಂದ ಮತ್ತೆ ಪರಮಾನಂದ

ಆನಂದ ಆನಂದ ಮತ್ತೆ ಪರಮಾನಂದ ಆನಂದ ಕಂದನೊಲಿಯೆ ಏನಂದಿದ್ದೇ ವೇದ ವೃಂದ ||ಪ|| ಅ ಮೊದಲು ಶಕಾರಂತ ಆ ಮಹಾ ವರ್ಣಗಳೆಲ್ಲಾ ಸ್ವಾಮಿಯಾದ ವಿಷ್ಣುವಿನ ನಾಮವೆಂದು ತಿಳಿದವರಿಗೆ ||೧|| ಜಲ ಕಾಷ್ಟ ಶೈಲ ಗಗನ ನೆಲ ಪಾವಕ ತರು ಫಲ ಪುಷ್ಪಗಳಲ್ಲಿ ಹರಿ ವ್ಯಾಪ್ತನೆಂದರಿತವರಿಗೆ ||೨|| ಪೋಪುದು, ಬರುತಿಪ್ಪುದು, ಕೋಪ ಶಾಂತಿ ಮಾಡುವುದು ರೂಪ ಲಾವಣ್ಯವು ಹರಿಯ ವ್ಯಾಪಾರವೆಂದರಿತವರಿಗೆ ||೩|| ಮಧ್ವ ಶಾಸ್ತ್ರ ಪ್ರವಚನ ಮುದ್ದು ಕೃಷ್ಣ ದರುಶನ ಶುದ್ಧ ವಿಜಯವಿಠಲನ ಪೊಂದಿ ಕೊಂಡಾಡುವವರಿಗೆ ||೪||
ದಾಸ ಸಾಹಿತ್ಯ ಪ್ರಕಾರ
ಬರೆದವರು