ಆರಿದ್ದರೇನಯ್ಯ ನೀನಿಲ್ಲದೆ

ಆರಿದ್ದರೇನಯ್ಯ ನೀನಿಲ್ಲದೆ

ಆರಿದ್ದರೇನಯ್ಯ  ನೀನಿಲ್ಲದೆ ||ಪ||
ಕಾರುಣ್ಯನಿಧಿ ಹರಿಯೆ ಕೈಯ ಬಿಡಬೇಡ ||ಅ||

ದುರುಳ ಕೌರವನಂದು ದ್ರುಪದಜೆಯ ಸೀರೆಯನು
ಕರಗಳಿಂ ಸೆಳೆಯುತಿರೆ ಪತಿಗಳೆಲ್ಲ
ಗರ ಹೊಡೆದಂತಿರ್ದರಲ್ಲದೆ ನರಹರಿಯೆ
ಕರುಣಿ ನೀನಲ್ಲದಿನ್ನಾರು ಕಾಯ್ದವರು     ||೧||

ಅಂದು ನೆಗಳಿನ ಬಾಧೆಯಿಂದ ಗಜ ಕೂಗಲು
ತಂದೆ ನೀ ವೈಕುಂಠದಿಂದ ಬಂದು
ಇಂದಿರೇಶನೆ ಚಕ್ರದಿಂದ ನಕ್ರನ ಬಾಯ
ಸಂಧಿಯನು ಸೀಳಿ ಕೃಪೆಯಿಂದ ಸಲಹಿದೆಯೊ ||೨||

ಅಜಮಿಳನು ಕುಲಗೆಡಲು ಕಾಲದೂತರು ಬರಲು
ನಿಜಸುತನ ಕರೆಯೆ ನೀನತಿವೇಗದಿ
ತ್ರಿಜಗದೊಡೆಯನೆ ಸಿರಿ ಪುರಂದರವಿಠಲ
ನಿಜದೂತರನು ಕಳುಹಿ ಕಾಯ್ದೆ ಶ್ರೀಹರಿಯೆ     ||



 

ದಾಸ ಸಾಹಿತ್ಯ ಪ್ರಕಾರ
ಬರೆದವರು