ಕಂತುಪಿತನೆ ನಿನ್ನ ಎಂತು ವರ್ಣಿಪೆ

ಕಂತುಪಿತನೆ ನಿನ್ನ ಎಂತು ವರ್ಣಿಪೆ

(ಕಾಂಬೋಧಿ ರಾಗ , ರೂಪಕ(ಆದಿ?)ತಾಳ) ಕಂತುಪಿತನೆ ನಿನ್ನ ಎಂತು ವರ್ಣಿಪೆ ಲಕ್ಷ್ಮೀ- ಕಾಂತ ಪಾಲಿಸೆನ್ನನು ನಿರಂತರದಲಿ ||ಪ|| ಕುಂತೀಪುತ್ರಗೆ ನೀನತ್ಯಂತ ಸಾರಧಿತ್ವವ ಮಾಡಿ ನಿಂತು ದುರ್ಯೋಧನನ ಶಿರವ ಅಂತಕನಿಗೊಪ್ಪಿಸಿದ ಧೀರ ||ಅ.ಪ|| ಸುಂದರವದನ ನಿನ್ನ ಕಂದ ಭಜಿಸಲು ಮುದ- ದಿಂದ ಕಂಬದೊಳ್ಬಂದೆ ಮಂದರೋದ್ಧರ ಸಿಂಧುಶಾಯಿ ರಕ್ಕಸನ ಕೊಂದು ಕರುಳಮಾಲೆಯನ್ನು ಚೆಂದದಿಂ ಕಂಧರದೊಳ್ಧರಿಸಿದಾನಂದಮೂರ್ತಿ ಇಂದಿರೇಶ ||೧|| ಜಂಭವೈರಿ ಮುಖ್ಯ ಸುರಕದಂಬ ಪೂಜಿತಾಂಘ್ರಿಯುಗಳ ನಂಬಿದ ಭಕ್ತರ ಕಾಯ್ವ ಅಂಬುಜನೇತ್ರ ಅಂಬರೀಷ ದ್ವಾದಶಿ ವ್ರತವ ಸಂಭ್ರಮದಿ ಮಾಡುತಿರೆ ಡೊಂಬಿಯಿಂ ದೂರ್ವಾಸ ಶಪಿಸೆ ಬೆಂಬಿಡದೆ ಚಕ್ರದಿ ಸಲಹಿದ ||೨|| ಗಂಗೆಯ ಜನಕ ನಿನ್ನ ಅಂಗನೆ ದ್ರೌಪದ ದೇವಿ ಭಂಗಬಿಡಿಸೆಂದು ಕೂಗೆ ಮಂಗಳಾಂಗನೆ ಸಾಂಗದಿಂದ ವಸ್ತ್ರಂಗಳ ಹಿಂಗದೆ ಪಾಲಿಸಿದಂಥ ರಂಗವಿಠಲ ಪಾಲಿಸೀಗ ತುಂಗವಿಕ್ರಮ ಎನ್ನ ಮಾತು ||೩||
ದಾಸ ಸಾಹಿತ್ಯ ಪ್ರಕಾರ
ಬರೆದವರು