ಹನುಮ

ಹನುಮನ ಮನೆಯವರು ನಾವು

ಹನುಮನ ಮನೆಯವರು ನಾವೆಲ್ಲರು ಹನುಮನ ಮನೆಯವರು ಅನುಮಾನ ಪಡದೆಲೆ ಸ್ಥಳವ ಕೊಡಿರಿ ಎಮಗೆ ||ಪಲ್ಲವಿ|| ಊರ್ಧ್ವಪುಂಡ್ರವ ನೋಡಿ, ಶ್ರದ್ಧೆ ಭಕುತಿ ನೋಡಿ ಹೃದ್ಗತವಾದೆಮ್ಮ ತತ್ವಗಳನು ನೋಡಿ ಇದ್ದುದನಿಲ್ಲೆಂದು ಅಪದ್ಧ ನುಡಿವರಲ್ಲಾ ಮಧ್ವ ಮುನಿಯು ನಮ್ಮ ತಿದ್ದಿರುವುದ ನೋಡಿ ||೧||
ದಾಸ ಸಾಹಿತ್ಯ ಪ್ರಕಾರ
ಬರೆದವರು

ಘಟಿಕಾಚಲದಿ ನಿಂತ ಶ್ರೀ ಹನುಮಂತ

ಘಟಿಕಾಚಲದಿ ನಿಂತ ಶ್ರೀ ಹನುಮಂತ ಘಟಿಕಾಚಲದಿ ನಿಂತ ಪಟು ಹನುಮಂತನ ಪಠನೆಯ ಮಾಡಲುತ್ಕಟದಿ ಪೊರೆವೆನೆಂದು ||ಪಲ್ಲವಿ|| ಚತುರ ಯುಗದಿ ತಾನು ಮುಖ್ಯಪ್ರಾಣನು ಚತುರ್ಮುಖನಯ್ಯನ ಚತುರ ಮೂರುತಿಗಳ ಚತುರತನದಿ ಭಜಿಸಿ ಚತುರ್ಮುಖನಾಗಿ ಜಗಕೆ ಚತುರ್ವಿಧ ಫಲ ಕೊಡುತ ||೧||
ದಾಸ ಸಾಹಿತ್ಯ ಪ್ರಕಾರ
ಬರೆದವರು

ಮಾರುತನೆ ಏಳೆಂದು ಎಬ್ಬಿಸಿದಳಂಜನೆಯು

ಪಲ್ಲವಿ: ಮಾರುತನೆ ಏಳೆಂದು ಎಬ್ಬಿಸಿದಳಂಜನೆಯು ಶ್ರೀ ರಾಮ ಸೇವೆಗೆ ತಡವಾಯಿತೇಳು ಚರಣಗಳು: ಸೇತು ಕಟ್ಟಲು ಬೇಕು ಶರಧಿ ದಾಟಲು ಬೇಕು ಮಾತೆಗೆ ಉಂಗುರ ಕೊಡಲುಬೇಕು ಪಾತಕಿ ರಾವಣನ ಶಿರವನಳಿಯಲುಬೇಕು ಸೀತೆಪತಿ ರಾಮನಿಗೆ ನಮಿಸಬೇಕು ಇಂತು ಕಳೆಯಲು ಬೇಕು ಅಜ್ಞಾತವಾಸವನು
ದಾಸ ಸಾಹಿತ್ಯ ಪ್ರಕಾರ
ಬರೆದವರು

ಬಾರೈ ಬಾರೈ ಭಾರತಿ ಮನೋಹರ

ಬಾರೈ ಬಾರೈ ಭಾರತಿ ಮನೋಹರ ಮಾರುತಿ ಗುರುವರನೆ ದೇವ || ಪಲ್ಲವಿ || ಪವನದೇವ ಬಾರೊ ಪವಿಸಮಗಾತ್ರ ಬಾರೊ ರವಿಜನ ಭವಭಯಹರ ಪಾವನ ಮೂರುತಿ || ೧ || ಮಧ್ವಮುನಿಯೆ ಬಾರೊ ಉದ್ಧರಿಸಲು ಬಾರೊ ಶುದ್ಧ ಮುಕುತಿದಾತ ದದ್ಧಲಪುರವಾಸ || ೨ || ಗಂಧವಾಹನ ಬಾರೊ ಸಿಂಧುಬಂಧನ ಬಾರೊ ಮಂಧರೋದ್ಧರ ಶಾಮ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಈತ ಮುಖ್ಯ ಪ್ರಾಣನಾಥ

ರಾಗ ಬೇಹಾಗ್/ಅಟ್ಟ ತಾಳ ಈತ ಮುಖ್ಯ ಪ್ರಾಣನಾಥ || ಪಲ್ಲವಿ || ಈತ ಶ್ರೀ ರಾಮ ಸೇವಕನೆನಿಸಿದಾತ || ಅನು ಪಲ್ಲವಿ || ಭಾನುವಿನ ತುಡಿಕಿದಾತ ಭಾರತಕೆ ಬಂದಾತ ವಾನರೋತ್ತಮ ಹನುಮ ಹರಿಶರಣನೀತ || ೧ || ವಾರಿಧಿಯ ನೆಗೆದಾತ ವನಚರಾಗ್ರೇಸರನೀತ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಏಳೇಳು ಶರಧಿಯು ಏಕವಾಗಿದೆ ಕಂಡ್ಯ

ರಾಗ ಸೌರಾಷ್ಟ್ರ/ಅಟ್ಟ ತಾಳ ಏಳೇಳು ಶರಧಿಯು ಏಕವಾಗಿದೆ ಕಂಡ್ಯ ಹ್ಯಾಗೆ ಬಂದೆ ಹೇಳೊ ಕೋತಿ || ಪಲ್ಲವಿ || ಏಳು ಶರಧಿಯು ಎನಗೆ ಏಳು ಕಾಲುವೆಯು ತೂಳಿ ಲಂಘಿಸಿ ಬಂದೆ ಭೂತ || ಅನು ಪಲ್ಲವಿ || ಏಳು ಸಮುದ್ರದೊಳಿರುವ ಮಕರಿ ಮತ್ಸ್ಯ ಹ್ಯಾಗೆ ಬಿಟ್ಟರು ಹೇಳೊ ಕೋತಿ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಸಾರಿ ಬಂದನೆ ಪ್ರಾಣೇಶ ಬಂದನೆ

ರಾಗ ಹಿಂದೂಸ್ಥಾನಿ ಕಾಪಿ/ಅಟ್ಟ ತಾಳ ಸಾರಿ ಬಂದನೆ ಪ್ರಾಣೇಶ ಬಂದನೆ || ಪಲ್ಲವಿ || ಸಾರಿ ಬಂದ ಲಂಕಾಪುರವ ಮೀರಿದ ರಾವಣನ ಕಂಡು ಧೀರನು ವಯ್ಯಾರದಿಂದ || ಅನು ಪಲ್ಲವಿ || ವಾಯು ಪುತ್ರನೆ ಶ್ರೀರಾಮನ ದೂತನೆ ಪ್ರೀಯದಿಂದ ಸೀತಾಂಗನೆಗೆ ಮುದ್ರಿಕೆಯ ತಂದಿತ್ತವನೆ || ೧ ||
ದಾಸ ಸಾಹಿತ್ಯ ಪ್ರಕಾರ
ಬರೆದವರು

ನೋಡಿರಯ್ಯ ಹನುಮಂತನ ಮಹಿಮೆಯ

ರಾಗ ಶಂಕರಾಭರಣ/ಚಾಪು ತಾಳ ನೋಡಿರಯ್ಯ ಹನುಮಂತನ ಮಹಿಮೆಯ ಬೇಡಿರೋ ವರಗಳನು || ಪಲ್ಲವಿ || ರೂಢಿಯೊಳು ಇವನನ್ನು ಪಾಡಿ ಪೊಗಳುತಿಪ್ಪ ಜನರ ನೋಡಿ ನೋಡಿ ವರವನೀವ ಗಾಡಿಕಾರ ಹನುಮನ್ನ || ಅನು ಪಲ್ಲವಿ || ಅಂದು ದಶರಥಸುತನಾಗಿ ಬಂದು ನಿಂದು ಸಾಕೇತದಿ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಸೇವಕತನದ ರುಚಿಯೇನರಿದ್ಯೋ

ರಚನೆ : ಪುರಂದರದಾಸರು ಶ್ರೀರಾಗ - ಆದಿತಾಳ ಸೇವಕತನದ ರುಚಿಯೇನರಿದ್ಯೋ | ದೇವ ಹನುಮರಾಯ | ವೈರಾಗ್ಯ ಬೇಡಿದೆ ||ಪಲ್ಲವಿ|| ಉದಧಿಯ ದಾಟಿ ಸೀತೆಯ ಕ್ಷೇಮ ತಂದಾಗ ಮದುವೆಯ ಮಾಡೆನ್ನಬಾರದಿತ್ತೇ ಪದದಿ ಪಾಷಾಣವ ಪೆಣ್ಣ ಮಾಡಿದವಗೆ ಇದು ಏನಸಾಧ್ಯವೊ ಹನುಮ ನೀನೊಲ್ಲದೆ ||೧||
ದಾಸ ಸಾಹಿತ್ಯ ಪ್ರಕಾರ
ಬರೆದವರು